<p><strong>ನವದೆಹಲಿ:</strong> ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕಲ್ಲಿದ್ದಲು ಸಚಿವಾಲಯದ ಮಾಜಿ ಕಾರ್ಯದರ್ಶಿ ಎಚ್.ಸಿ. ಗುಪ್ತಾ ಅವರಿಗೆ ದೆಹಲಿ ನ್ಯಾಯಾಲಯ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.</p>.<p>ಇತರ ಅಧಿಕಾರಿಗಳಾದ ಕೆ.ಎಸ್. ಕ್ರೊಫಾ ಮತ್ತು ಕೆ.ಸಿ ಸಮ್ರಿಯಾ ಅವರಿಗೂ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ಮೂವರಿಗೂ ತಲಾ ₹ 50 ಸಾವಿರ ದಂಡ ವಿಧಿಸಲಾಗಿದೆ. ಜೈಲು ಶಿಕ್ಷೆ ನಾಲ್ಕು ವರ್ಷಗಳಿಗಿಂತ ಕಡಿಮೆ ಇದ್ದ ಕಾರಣ ಮೂವರಿಗೆ ಜಾಮೀನು ದೊರೆತಿದೆ.</p>.<p>ಇದೇ ಪ್ರಕರಣದಲ್ಲಿ ತಪ್ಪಿತಸ್ಥರಾದ ವಿಕಾಸ್ ಮೆಟಲ್ಸ್ ಆ್ಯಂಡ್ ಪವರ್ ಲಿಮಿಟೆಡ್ನ (ವಿಎಂಪಿಎಲ್) ವ್ಯವಸ್ಥಾಪಕ ನಿರ್ದೇಶಕ ವಿಕಾಸ್ ಪಾಟ್ನಿ ಮತ್ತು ಅಧಿಕಾರಿ ಆನಂದ್ ಮಲ್ಲಿಕ್ ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.</p>.<p>ಪಾಟ್ನಿ ಅವರಿಗೆ ₹25 ಲಕ್ಷ ಹಾಗೂ ಮಲ್ಲಿಕ್ ಅವರಿಗೆ ₹2 ಲಕ್ಷ ದಂಡ ವಿಧಿಸಲಾಗಿದೆ. ವಿಎಂಪಿಎಲ್ ಕಂಪನಿಗೂ ₹1 ಲಕ್ಷ ದಂಡ ವಿಧಿಸಲಾಗಿದೆ. ವಿಶೇಷ ನ್ಯಾಯಾಧೀಶ ಭರತ್ ಪ್ರಸಾರ್ ಈ ತೀರ್ಪು ನೀಡಿದರು.</p>.<p>ಪಶ್ಚಿಮ ಬಂಗಾಳದ ಮೊಯಿರಾ ಮತ್ತು ಮಧುಜೊರೆ ಕಲ್ಲಿದ್ದಲು ನಿಕ್ಷೇಪಗಳನ್ನು ವಿಎಂಪಿಎಲ್ಗೆ ಹಂಚಿಕೆ ಮಾಡುವಲ್ಲಿ ಅವ್ಯವಹಾರ ನಡೆದಿತ್ತು ಎಂದು ಆರೋಪಿಸಲಾಗಿತ್ತು. 2012ರ ಸೆಪ್ಟೆಂಬರ್ನಲ್ಲಿ ಸಿಬಿಐ ಈ ಬಗ್ಗೆ ಎಫ್ಐಆರ್ ದಾಖಲಿಸಿತ್ತು. ಐವರು ತಪ್ಪಿತಸ್ಥರಿಗೂ ಏಳು ವರ್ಷ ಜೈಲು ಶಿಕ್ಷೆ ವಿಧಿಸಬೇಕು ಮತ್ತು ಖಾಸಗಿ ಕಂಪನಿಗೆ ಅತಿ ಹೆಚ್ಚು ದಂಡ ವಿಧಿಸಬೇಕು ಎಂದು ಸಿಬಿಐ ಕೋರಿತ್ತು.</p>.<p>ನ್ಯಾಯಾಲಯ ನವೆಂಬರ್ 30ರಂದು ಎಚ್.ಸಿ. ಗುಪ್ತಾ, ಕಲ್ಲಿದ್ದಲು ಸಚಿವಾಲಯದ ಮಾಜಿ ಜಂಟಿ ಕಾರ್ಯದರ್ಶಿ ಕ್ರೊಫಾ, ಅಂದಿನ ನಿರ್ದೇಶಕ ಸಮ್ರಿಯಾ ಹಾಗೂ ಪಾಟ್ನಿ ಮತ್ತು ಮಲ್ಲಿಕ್ ತಪ್ಪಿತಸ್ಥರು ಎಂದು ತೀರ್ಪು ನೀಡಿತ್ತು. ಜತೆಗೆ ವಿಎಂಪಿಎಲ್ ಕಂಪನಿ ಸಹ ದೋಷಿ ಎಂದು ತಿಳಿಸಿತ್ತು.</p>.<p><strong>40 ಪ್ರಕರಣ</strong></p>.<p>ಯುಪಿಎ–1 ಮತ್ತು ಯುಪಿಎ–2 ಸರ್ಕಾರದ ಅವಧಿಯಲ್ಲಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆಯ 40 ಪ್ರಕರಣಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ಸಿಬಿಐ ಆರೋಪಪಟ್ಟಿ ಸಲ್ಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕಲ್ಲಿದ್ದಲು ಸಚಿವಾಲಯದ ಮಾಜಿ ಕಾರ್ಯದರ್ಶಿ ಎಚ್.ಸಿ. ಗುಪ್ತಾ ಅವರಿಗೆ ದೆಹಲಿ ನ್ಯಾಯಾಲಯ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.</p>.<p>ಇತರ ಅಧಿಕಾರಿಗಳಾದ ಕೆ.ಎಸ್. ಕ್ರೊಫಾ ಮತ್ತು ಕೆ.ಸಿ ಸಮ್ರಿಯಾ ಅವರಿಗೂ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ಮೂವರಿಗೂ ತಲಾ ₹ 50 ಸಾವಿರ ದಂಡ ವಿಧಿಸಲಾಗಿದೆ. ಜೈಲು ಶಿಕ್ಷೆ ನಾಲ್ಕು ವರ್ಷಗಳಿಗಿಂತ ಕಡಿಮೆ ಇದ್ದ ಕಾರಣ ಮೂವರಿಗೆ ಜಾಮೀನು ದೊರೆತಿದೆ.</p>.<p>ಇದೇ ಪ್ರಕರಣದಲ್ಲಿ ತಪ್ಪಿತಸ್ಥರಾದ ವಿಕಾಸ್ ಮೆಟಲ್ಸ್ ಆ್ಯಂಡ್ ಪವರ್ ಲಿಮಿಟೆಡ್ನ (ವಿಎಂಪಿಎಲ್) ವ್ಯವಸ್ಥಾಪಕ ನಿರ್ದೇಶಕ ವಿಕಾಸ್ ಪಾಟ್ನಿ ಮತ್ತು ಅಧಿಕಾರಿ ಆನಂದ್ ಮಲ್ಲಿಕ್ ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.</p>.<p>ಪಾಟ್ನಿ ಅವರಿಗೆ ₹25 ಲಕ್ಷ ಹಾಗೂ ಮಲ್ಲಿಕ್ ಅವರಿಗೆ ₹2 ಲಕ್ಷ ದಂಡ ವಿಧಿಸಲಾಗಿದೆ. ವಿಎಂಪಿಎಲ್ ಕಂಪನಿಗೂ ₹1 ಲಕ್ಷ ದಂಡ ವಿಧಿಸಲಾಗಿದೆ. ವಿಶೇಷ ನ್ಯಾಯಾಧೀಶ ಭರತ್ ಪ್ರಸಾರ್ ಈ ತೀರ್ಪು ನೀಡಿದರು.</p>.<p>ಪಶ್ಚಿಮ ಬಂಗಾಳದ ಮೊಯಿರಾ ಮತ್ತು ಮಧುಜೊರೆ ಕಲ್ಲಿದ್ದಲು ನಿಕ್ಷೇಪಗಳನ್ನು ವಿಎಂಪಿಎಲ್ಗೆ ಹಂಚಿಕೆ ಮಾಡುವಲ್ಲಿ ಅವ್ಯವಹಾರ ನಡೆದಿತ್ತು ಎಂದು ಆರೋಪಿಸಲಾಗಿತ್ತು. 2012ರ ಸೆಪ್ಟೆಂಬರ್ನಲ್ಲಿ ಸಿಬಿಐ ಈ ಬಗ್ಗೆ ಎಫ್ಐಆರ್ ದಾಖಲಿಸಿತ್ತು. ಐವರು ತಪ್ಪಿತಸ್ಥರಿಗೂ ಏಳು ವರ್ಷ ಜೈಲು ಶಿಕ್ಷೆ ವಿಧಿಸಬೇಕು ಮತ್ತು ಖಾಸಗಿ ಕಂಪನಿಗೆ ಅತಿ ಹೆಚ್ಚು ದಂಡ ವಿಧಿಸಬೇಕು ಎಂದು ಸಿಬಿಐ ಕೋರಿತ್ತು.</p>.<p>ನ್ಯಾಯಾಲಯ ನವೆಂಬರ್ 30ರಂದು ಎಚ್.ಸಿ. ಗುಪ್ತಾ, ಕಲ್ಲಿದ್ದಲು ಸಚಿವಾಲಯದ ಮಾಜಿ ಜಂಟಿ ಕಾರ್ಯದರ್ಶಿ ಕ್ರೊಫಾ, ಅಂದಿನ ನಿರ್ದೇಶಕ ಸಮ್ರಿಯಾ ಹಾಗೂ ಪಾಟ್ನಿ ಮತ್ತು ಮಲ್ಲಿಕ್ ತಪ್ಪಿತಸ್ಥರು ಎಂದು ತೀರ್ಪು ನೀಡಿತ್ತು. ಜತೆಗೆ ವಿಎಂಪಿಎಲ್ ಕಂಪನಿ ಸಹ ದೋಷಿ ಎಂದು ತಿಳಿಸಿತ್ತು.</p>.<p><strong>40 ಪ್ರಕರಣ</strong></p>.<p>ಯುಪಿಎ–1 ಮತ್ತು ಯುಪಿಎ–2 ಸರ್ಕಾರದ ಅವಧಿಯಲ್ಲಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆಯ 40 ಪ್ರಕರಣಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ಸಿಬಿಐ ಆರೋಪಪಟ್ಟಿ ಸಲ್ಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>