ಬಿಜೆಪಿ ಆಡಳಿತದ ರಾಜ್ಯ ಸರ್ಕಾರದಲ್ಲಿ ಸಚಿವರಾಗಿದ್ದು, ಟಿಕೆಟ್ ನಿರಾಕರಣೆಯ ಕಾರಣಕ್ಕೆ ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ನಾಮದೇವ್ ದಾಸ್ ತ್ಯಾಗಿ ಅಲಿಯಾಸ್ ಕಂಪ್ಯೂಟರ್ ಬಾಬಾ ಅವರ ನೆತೃತ್ವದಲ್ಲಿ ನಗರಕ್ಕೆ ಬಂದಿರುವ ಸಾಧುಗಳು, ಮೂರು ದಿನಗಳ ಕಾಲ ಇಲ್ಲಿದ್ದು ಪ್ರಜ್ಞಾ ಸಿಂಗ್ ವಿರುದ್ಧ ಪ್ರಚಾರ ನಡೆಸಲಿದ್ದಾರೆ. ನಗರದಲ್ಲಿ ಮಂಗಳವಾರ ಅವರು ಹಟಯೋಗ ಹಾಗೂ ರೋಡ್ ಶೋ ನಡೆಸಿದರು.