‘ವಿಧಾನಸಭಾ ಚುನಾವಣೆಗೂ ಮುನ್ನ ಈ ಕೆಲಸವನ್ನು ಮಾಡಿ ಮುಗಿಸಬೇಕು ಎಂದು ಕಾಂಗ್ರೆಸ್ ಬಯಸುತ್ತದೆ. ಜನಸಂಖ್ಯೆ, ಪ್ರದೇಶ ಮುಂತಾದ ಅಂಶಗಳನ್ನು ಗಣನೆಗೆ ತೆಗೆದುಕೊಂಡು, ಸಂವಿಧಾನ ಹಾಗೂ ಕಾನೂನಿಗೆ ಅನುಗುಣವಾಗಿ ಈ ಕೆಲಸವನ್ನು ಮಾಡಬೇಕು’ ಎಂದು ಜಮ್ಮು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರ ರವೀಂದ್ರ ಶರ್ಮಾ ಹೇಳಿದ್ದಾರೆ.