<p><strong>ಜೈಪುರ:</strong> ಎರಡು ರಾಜ್ಯಸಭಾ ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ರಾಜಸ್ಥಾನದ ಕಾಂಗ್ರೆಸ್ ಪಕ್ಷದ ನಾಯಕ ಅವಿನಾಶ್ ಪಾಂಡೆ ಹೇಳಿದ್ದಾರೆ.</p>.<p>ಬಿಜೆಪಿ ವಾಮಮಾರ್ಗದ ಮೂಲಕ ಗೆಲ್ಲುವ ಪ್ರಯತ್ನ ಮಾಡುತ್ತಿದೆ. ಅವರ ಕುದುರೆ ವ್ಯಾಪಾರದ ತಂತ್ರ ಫಲಿಸುವುದಿಲ್ಲ ಎಂದು ಅವಿನಾಶ್ ಪಾಂಡೆ ಶನಿವಾರ ತಡ ರಾತ್ರಿ ತಿಳಿಸಿದ್ದಾರೆ.</p>.<p>ಇತರೆ ಪಕ್ಷದ ಶಾಸಕರು, ಪಕ್ಷೇತರ ಶಾಸಕರು ನಮಗೆ ಬೆಂಬಲ ನೀಡಲಿದ್ದು ಕಾಂಗ್ರೆಸ್ಸುಲಭವಾಗಿ ಎರಡುಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸವನ್ನು ಪಾಂಡೆ ವ್ಯಕ್ತಪಡಿಸಿದರು. ಜೂನ್ 19ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗಲಿದೆ ಎಂದರು.</p>.<p>ಕಾಂಗ್ರೆಸ್ ಪಕ್ಷ ಕೆ.ಸಿ.ವೇಣುಗೋಪಾಲ್ ಹಾಗೂ ನೀರಜ್ ಡಾಂಗಿ ಅವರನ್ನು ಕಣಕ್ಕೆ ಇಳಿಸಿದೆ. ರಾಜಸ್ಥಾನ ವಿಧಾನಸಭೆಯ ಬಲಾಬಲದ ಪ್ರಕಾರ ಕಾಂಗ್ರೆಸ್ 2, ಬಿಜೆಪಿ 1 ಸ್ಥಾನವನ್ನು ಸುಲಭವಾಗಿ ಗೆಲ್ಲಲಿದೆ. ಆದರೆ ಬಿಜೆಪಿ 2ನೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರುವುದು ಕಾಂಗ್ರೆಸ್ನಲ್ಲಿ ಆತಂಕ ಉಂಟಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ಎರಡು ರಾಜ್ಯಸಭಾ ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ರಾಜಸ್ಥಾನದ ಕಾಂಗ್ರೆಸ್ ಪಕ್ಷದ ನಾಯಕ ಅವಿನಾಶ್ ಪಾಂಡೆ ಹೇಳಿದ್ದಾರೆ.</p>.<p>ಬಿಜೆಪಿ ವಾಮಮಾರ್ಗದ ಮೂಲಕ ಗೆಲ್ಲುವ ಪ್ರಯತ್ನ ಮಾಡುತ್ತಿದೆ. ಅವರ ಕುದುರೆ ವ್ಯಾಪಾರದ ತಂತ್ರ ಫಲಿಸುವುದಿಲ್ಲ ಎಂದು ಅವಿನಾಶ್ ಪಾಂಡೆ ಶನಿವಾರ ತಡ ರಾತ್ರಿ ತಿಳಿಸಿದ್ದಾರೆ.</p>.<p>ಇತರೆ ಪಕ್ಷದ ಶಾಸಕರು, ಪಕ್ಷೇತರ ಶಾಸಕರು ನಮಗೆ ಬೆಂಬಲ ನೀಡಲಿದ್ದು ಕಾಂಗ್ರೆಸ್ಸುಲಭವಾಗಿ ಎರಡುಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸವನ್ನು ಪಾಂಡೆ ವ್ಯಕ್ತಪಡಿಸಿದರು. ಜೂನ್ 19ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗಲಿದೆ ಎಂದರು.</p>.<p>ಕಾಂಗ್ರೆಸ್ ಪಕ್ಷ ಕೆ.ಸಿ.ವೇಣುಗೋಪಾಲ್ ಹಾಗೂ ನೀರಜ್ ಡಾಂಗಿ ಅವರನ್ನು ಕಣಕ್ಕೆ ಇಳಿಸಿದೆ. ರಾಜಸ್ಥಾನ ವಿಧಾನಸಭೆಯ ಬಲಾಬಲದ ಪ್ರಕಾರ ಕಾಂಗ್ರೆಸ್ 2, ಬಿಜೆಪಿ 1 ಸ್ಥಾನವನ್ನು ಸುಲಭವಾಗಿ ಗೆಲ್ಲಲಿದೆ. ಆದರೆ ಬಿಜೆಪಿ 2ನೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರುವುದು ಕಾಂಗ್ರೆಸ್ನಲ್ಲಿ ಆತಂಕ ಉಂಟಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>