ವಿಜಯಪುರದ ಬಿಎಲ್ಡಿಇ ಸಂಸ್ಥೆಯ ಮುಖ್ಯಸ್ಥ, ಸಚಿವ ಎಂ.ಬಿ. ಪಾಟೀಲ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ 2017ರಲ್ಲಿ ಬರೆದಿದ್ದಾರೆ ಎನ್ನಲಾದ ನಕಲಿ ಪತ್ರವನ್ನು ಲೋಕಸಭೆ ಚುನಾವಣೆ ಸಂದರ್ಭ ಪ್ರಕಟಿಸುವ ಮೂಲಕ ಈ ಮಾಧ್ಯಮ ಸಂಸ್ಥೆಗಳು ಪಕ್ಷಕ್ಕೆ ಧಕ್ಕೆ ಉಂಟು ಮಾಡಲು ಯತ್ನಿಸಿವೆ ಎಂದು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಆಯೋಗಕ್ಕೆ ದೂರು ನೀಡಿದ ನಂತರ ಸುದ್ದಿಗಾರರಿಗೆ ತಿಳಿಸಿದರು.