<p class="title"><strong>ನವದೆಹಲಿ: </strong>ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ತಡೆ ನೀಡಿ ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.</p>.<p class="title">‘ಮುಂದಿನ ದಿನಗಳಲ್ಲಿ ಮೋದಿ ಎಲ್ಲೆಲ್ಲಿ ರ್ಯಾಲಿ ನಡೆಸುತ್ತಾರೋ, ಆ ಪ್ರದೇಶದ ಸಾಂಸ್ಕೃತಿಕ ಲಕ್ಷಣಗಳ ಬಗ್ಗೆ ಮಾಹಿತಿ ನೀಡುವಂತೆ ನೀತಿ ಆಯೋಗದ ಮೂಲಕ ಆಯಾ ಜಿಲ್ಲಾಡಳಿತಗಳಿಗೆ ಪತ್ರ ಬರೆಯಲಾಗಿದೆ. ಪ್ರಧಾನಿ ಕಚೇರಿಯು ನೀತಿ ಆಯೋಗದ ಮೂಲಕ ಈ ಕೆಲಸ ಮಾಡಿಸುತ್ತಿದೆ. 40 ವರ್ಷಗಳ ಹಿಂದೆ ಇಂದಿರಾ ಗಾಂಧಿ ಅವರ ಮೇಲೆ ಇಂಥದ್ದೇ ಆರೋಪದ ಆಧಾರದಲ್ಲಿ ಕ್ರಮ ತೆಗೆದುಕೊಳ್ಳಲಾಗಿತ್ತು. ಮೋದಿ ವಿರುದ್ಧವೂ ಕ್ರಮ ತೆಗೆದುಕೊಳ್ಳಿ’ ಎಂದು ಕಾಂಗ್ರೆಸ್ ಆಗ್ರಹಿಸಿದೆ.</p>.<p class="title">ಮೋದಿ ಅವರು ಮೇ 6ರಂದು ಮಧ್ಯಪ್ರದೇಶದ ಸಾಗರ್ನಲ್ಲಿ ರ್ಯಾಲಿ ನಡೆಸಲಿದ್ದಾರೆ. ಅದೇ ದಿನ ಪಕ್ಕದ ದಮೋಹ್ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಆ ರ್ಯಾಲಿಯು ಮತದಾನವನ್ನು ಪ್ರಭಾವಿಸಲಿದೆ. ಇದಕ್ಕೂ ತಡೆ ನೀಡಬೇಕು ಎಂದುಕಾಂಗ್ರೆಸ್ ತನ್ನ ದೂರಿನಲ್ಲಿ ಆಗ್ರಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ತಡೆ ನೀಡಿ ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.</p>.<p class="title">‘ಮುಂದಿನ ದಿನಗಳಲ್ಲಿ ಮೋದಿ ಎಲ್ಲೆಲ್ಲಿ ರ್ಯಾಲಿ ನಡೆಸುತ್ತಾರೋ, ಆ ಪ್ರದೇಶದ ಸಾಂಸ್ಕೃತಿಕ ಲಕ್ಷಣಗಳ ಬಗ್ಗೆ ಮಾಹಿತಿ ನೀಡುವಂತೆ ನೀತಿ ಆಯೋಗದ ಮೂಲಕ ಆಯಾ ಜಿಲ್ಲಾಡಳಿತಗಳಿಗೆ ಪತ್ರ ಬರೆಯಲಾಗಿದೆ. ಪ್ರಧಾನಿ ಕಚೇರಿಯು ನೀತಿ ಆಯೋಗದ ಮೂಲಕ ಈ ಕೆಲಸ ಮಾಡಿಸುತ್ತಿದೆ. 40 ವರ್ಷಗಳ ಹಿಂದೆ ಇಂದಿರಾ ಗಾಂಧಿ ಅವರ ಮೇಲೆ ಇಂಥದ್ದೇ ಆರೋಪದ ಆಧಾರದಲ್ಲಿ ಕ್ರಮ ತೆಗೆದುಕೊಳ್ಳಲಾಗಿತ್ತು. ಮೋದಿ ವಿರುದ್ಧವೂ ಕ್ರಮ ತೆಗೆದುಕೊಳ್ಳಿ’ ಎಂದು ಕಾಂಗ್ರೆಸ್ ಆಗ್ರಹಿಸಿದೆ.</p>.<p class="title">ಮೋದಿ ಅವರು ಮೇ 6ರಂದು ಮಧ್ಯಪ್ರದೇಶದ ಸಾಗರ್ನಲ್ಲಿ ರ್ಯಾಲಿ ನಡೆಸಲಿದ್ದಾರೆ. ಅದೇ ದಿನ ಪಕ್ಕದ ದಮೋಹ್ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಆ ರ್ಯಾಲಿಯು ಮತದಾನವನ್ನು ಪ್ರಭಾವಿಸಲಿದೆ. ಇದಕ್ಕೂ ತಡೆ ನೀಡಬೇಕು ಎಂದುಕಾಂಗ್ರೆಸ್ ತನ್ನ ದೂರಿನಲ್ಲಿ ಆಗ್ರಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>