‘ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭಾವ ರಾಬರ್ಟ್ ವಾದ್ರಾ ಅವರೊಂದಿಗೆ ಸಂಬಂಧ ಹೊಂದಿರುವವರ ವಿರುದ್ಧ ತನಿಖಾ ಸಂಸ್ಥೆಗಳು ನಡೆಸಿದ ದಾಳಿ ನಂತರ ಈ ಸಂಸ್ಥೆಗಳಿಗೆ ಕಾಂಗ್ರೆಸ್ ಬೆದರಿಕೆ ಹಾಕುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದು, ಈ ಮೂಲಕ ಜನರಿಗೆ ನೀಡಿದ ಭರವಸೆ ಈಡೇರಿಸಿದ್ದಾರೆ’ ಎಂದು ಬಿಜೆಪಿ ವಕ್ತಾರ ಶಾನವಾಜ್ ಹುಸೇನ್ ಭಾನುವಾರ ಹೇಳಿದರು.