ಇದೇ ರೀತಿ ಕೀರ್ತಿ ಆಜಾದ್ ಪ್ರತಿಕ್ರಿಯೆ ನೀಡಿ, ಹರಿಯಾಣ ವಿಧಾನಸಭಾ ಚುನಾವಣೋತ್ತರ ಸಮೀಕ್ಷೆಗಳಲ್ಲೂ ಇದೇ ರೀತಿಯಾಯಿತು.ಸಮೀಕ್ಷೆಗಳು ಹರಿಯಾಣದಲ್ಲಿ ಕಾಂಗ್ರೆಸ್ ಕೇವಲ 3 ಸ್ಥಾನಗಳನ್ನು ಪಡೆಯುತ್ತದೆ ಎಂದು ಹೇಳಿದ್ದವು. ಆದರೆ, ಹರಿಯಾಣದಲ್ಲಿ 31 ಸ್ಥಾನಗಳನ್ನು ಪಡೆದೆವು. ಅದೇ ರೀತಿ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಘಡದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂದು ಸಮೀಕ್ಷೆಗಳು ಹೇಳಿದ್ದವು. ಆದರೆ, ಈ ಮೂರು ರಾಜ್ಯಗಳಲ್ಲಿ ನಾವು ಸರ್ಕಾರ ರಚನೆ ಮಾಡಿದೆವು. ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಪಡೆಯುವ ವಿಶ್ವಾಸವಿದೆ ಎಂದು ಕೀರ್ತಿಹೇಳಿದ್ದಾರೆ.