<p><strong>ನವದೆಹಲಿ:</strong>ಕರ್ನಾಟಕದಲ್ಲಿ ಆಡಳಿತದಲ್ಲಿರುವ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಆಪರೇಷನ್ ಕಮಲ ತಂತ್ರವನ್ನು ಹೆಣೆಯಲಾಗಿದ್ದು, ಇದರ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿ.ಎಸ್.ಯಡಿಯೂರಪ್ಪ ಅವರ ಕೈವಾಡ ಇದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.</p>.<p>ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ನಾಗನಗೌಡ ಅವರ ಪುತ್ರ ಶರಣ್ ಗೌಡ ಅವರಿಗೆ ಆಮಿಷ ಒಡ್ಡಿದರೆನ್ನಲಾದ ಆಡಿಯೋವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಬಿಡುಗಡೆ ಮಾಡಿದ್ದರು.</p>.<p><strong>ಇದನ್ನೂ ಓದಿ</strong>:<a href="https://www.prajavani.net/stories/stateregional/audio-recording-which-released-613256.html" target="_blank">ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಆಡಿಯೊದಲ್ಲಿ ಏನಿದೆ?</a></p>.<p>ಈ ಆಡಿಯೋ ಸಂಬಂಧ ಪ್ರತಿಕಾಗೋಷ್ಟಿ ನಡೆಸಿದ ಕಾಂಗ್ರೆಸ್ ನಾಯಕರು,ಚುನಾವಣೆಗಳಿಗಾಗಿ ಸಾಕಷ್ಟು ಹಣ ಖರ್ಚು ಮಾಡುವ ಬಿಜೆಪಿಶಾಸಕರಿಗೆ, ಸ್ಪೀಕರ್ಗೆ ಕೋಟಿ ಕೋಟಿ ಹಣದ ಆಮಿಷ ಒಡ್ಡಿದೆ. ಸಂವಿಧಾನಬದ್ಧ ಸರ್ಕಾರವನ್ನು ಉರುಳಿಸಲು ಮೂವರೂ ಪ್ರಯತ್ನಿಸುತ್ತಿದ್ದಾರೆಎಂದು ಹರಿಹಾಯ್ದರು.</p>.<p>ಮುಂದಿನ ಚುನಾವಣೆ ಖರ್ಚಿಗಾಗಿ ಪ್ರತಿಯೊಬ್ಬಶಾಸಕರಿಗೆ ₹ 10 ಕೋಟಿ ಹಣ ನೀಡುವುದಾಗಿ ಆಮಿಷ ಒಡ್ಡಲಾಗಿದೆ ಎಂದು ಆರೋಪಿಸಿದ ಎಐಸಿಸಿ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ, ಇದುವರೆಗೆ ಸುಮಾರು ₹ 450 ಕೋಟಿಗೂ ಹೆಚ್ಚು ಹಣದ ಆಮಿಷ ನೀಡಲಾಗಿದೆ.ಇಷ್ಟು ಹಣ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಕರ್ನಾಟಕದಲ್ಲಿ ಆಡಳಿತದಲ್ಲಿರುವ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಆಪರೇಷನ್ ಕಮಲ ತಂತ್ರವನ್ನು ಹೆಣೆಯಲಾಗಿದ್ದು, ಇದರ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿ.ಎಸ್.ಯಡಿಯೂರಪ್ಪ ಅವರ ಕೈವಾಡ ಇದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.</p>.<p>ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ನಾಗನಗೌಡ ಅವರ ಪುತ್ರ ಶರಣ್ ಗೌಡ ಅವರಿಗೆ ಆಮಿಷ ಒಡ್ಡಿದರೆನ್ನಲಾದ ಆಡಿಯೋವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಬಿಡುಗಡೆ ಮಾಡಿದ್ದರು.</p>.<p><strong>ಇದನ್ನೂ ಓದಿ</strong>:<a href="https://www.prajavani.net/stories/stateregional/audio-recording-which-released-613256.html" target="_blank">ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಆಡಿಯೊದಲ್ಲಿ ಏನಿದೆ?</a></p>.<p>ಈ ಆಡಿಯೋ ಸಂಬಂಧ ಪ್ರತಿಕಾಗೋಷ್ಟಿ ನಡೆಸಿದ ಕಾಂಗ್ರೆಸ್ ನಾಯಕರು,ಚುನಾವಣೆಗಳಿಗಾಗಿ ಸಾಕಷ್ಟು ಹಣ ಖರ್ಚು ಮಾಡುವ ಬಿಜೆಪಿಶಾಸಕರಿಗೆ, ಸ್ಪೀಕರ್ಗೆ ಕೋಟಿ ಕೋಟಿ ಹಣದ ಆಮಿಷ ಒಡ್ಡಿದೆ. ಸಂವಿಧಾನಬದ್ಧ ಸರ್ಕಾರವನ್ನು ಉರುಳಿಸಲು ಮೂವರೂ ಪ್ರಯತ್ನಿಸುತ್ತಿದ್ದಾರೆಎಂದು ಹರಿಹಾಯ್ದರು.</p>.<p>ಮುಂದಿನ ಚುನಾವಣೆ ಖರ್ಚಿಗಾಗಿ ಪ್ರತಿಯೊಬ್ಬಶಾಸಕರಿಗೆ ₹ 10 ಕೋಟಿ ಹಣ ನೀಡುವುದಾಗಿ ಆಮಿಷ ಒಡ್ಡಲಾಗಿದೆ ಎಂದು ಆರೋಪಿಸಿದ ಎಐಸಿಸಿ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ, ಇದುವರೆಗೆ ಸುಮಾರು ₹ 450 ಕೋಟಿಗೂ ಹೆಚ್ಚು ಹಣದ ಆಮಿಷ ನೀಡಲಾಗಿದೆ.ಇಷ್ಟು ಹಣ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>