<p><strong>ನವದೆಹಲಿ</strong>: ‘ಕೋವಿಡ್-19ರಿಂದಾಗಿ ಜಾರಿಯಲ್ಲಿರುವ ಲಾಕ್ಡೌನ್ ಅನ್ನು ಎಷ್ಟು ಸಮಯ ಮುಂದುವರಿಸಬೇಕು ಎಂದು ನಿರ್ಣಯಿಸಲು ಕೇಂದ್ರ ಸರ್ಕಾರ ಯಾವ ಮಾನದಂಡ ಅನುಸರಿಸುತ್ತಿದೆ? ಮೇ 17ರ ನಂತರ ಏನು? ಹೇಗೆ?’ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಶ್ನಿಸಿದ್ದಾರೆ.</p>.<p>‘ಕೋವಿಡ್-19 ಹಾಗೂ ಲಾಕ್ಡೌನ್ ನಂತರದ ಸ್ಥಿತಿ ಕುರಿತು ಚರ್ಚಿಸಲು, ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸೋನಿಯಾ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಆ ವೇಳೆ ಅವರು ಈ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ’ ಎಂದು ಕಾಂಗ್ರೆಸ್ನ ಮುಖ್ಯ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದ್ದಾರೆ.</p>.<p>ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಹ ಸಭೆಯಲ್ಲಿದ್ದರು.</p>.<p>‘ಸೋನಿಯಾಜಿ ಅವರು ಪ್ರಶ್ನಿಸಿದಂತೆ ಲಾಕ್ಡೌನ್ 3.0 ನಂತರ ಏನಾಗುತ್ತದೆ ಎನ್ನುವುದು ನಮಗೆ ತಿಳಿಯಬೇಕು. ದೇಶದಲ್ಲಿ ಲಾಕ್ಡೌನ್ ತೆರವುಗೊಳಿಸಲು ಕೇಂದ್ರ ಸರ್ಕಾರ ಯಾವ ಯೋಜನೆ ರೂಪಿಸುತ್ತಿದೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಬೇಕಿದೆ. ಸೋನಿಯಾಜಿ ಅವರು ಈಗಾಗಲೆ ಈ ವಿಷಯ ಪ್ರಸ್ತಾಪಿಸಿದ್ದಾರೆ’ ಎಂದು ಮನಮೋಹನ್ ಸಿಂಗ್ ಹೇಳಿದ್ದಾರೆ.</p>.<p>‘ದೆಹಲಿಯಲ್ಲಿರುವವರು ಪ್ರಾದೇಶಿಕವಾಗಿ ಏನಾಗುತ್ತಿದೆ ಎನ್ನುವುದರ ಅರಿವಿಲ್ಲದೆ ಕೋವಿಡ್-19 ವಲಯಗಳನ್ನು ವರ್ಗೀಕರಿಸುತ್ತಿದ್ದಾರೆ ಎನ್ನುವುದು ಕಳವಳದ ಸಂಗತಿ' ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಸಭೆಯಲ್ಲಿ ಹೇಳಿದ್ದಾರೆ.</p>.<p>‘ರಾಜ್ಯಗಳಿಗೆ ಆರ್ಥಿಕ ಪ್ಯಾಕೇಜ್ ನೀಡುವ ಕುರಿತು ಪ್ರಧಾನಿ ಒಂದು ಮಾತೂ ಆಡಿಲ್ಲ. ದೊಡ್ಡಮೊತ್ತದ ಪ್ಯಾಕೇಜ್ ನೀಡದ ಹೊರತು ರಾಜ್ಯಗಳು ಹಾಗೂ ದೇಶ ನಡೆಯುವುದು ಹೇಗೆ? ನಾವು 10 ಸಾವಿರ ಕೋಟಿ ಕಳೆದುಕೊಂಡಿದ್ದೇವೆ’ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಕೋವಿಡ್-19ರಿಂದಾಗಿ ಜಾರಿಯಲ್ಲಿರುವ ಲಾಕ್ಡೌನ್ ಅನ್ನು ಎಷ್ಟು ಸಮಯ ಮುಂದುವರಿಸಬೇಕು ಎಂದು ನಿರ್ಣಯಿಸಲು ಕೇಂದ್ರ ಸರ್ಕಾರ ಯಾವ ಮಾನದಂಡ ಅನುಸರಿಸುತ್ತಿದೆ? ಮೇ 17ರ ನಂತರ ಏನು? ಹೇಗೆ?’ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಶ್ನಿಸಿದ್ದಾರೆ.</p>.<p>‘ಕೋವಿಡ್-19 ಹಾಗೂ ಲಾಕ್ಡೌನ್ ನಂತರದ ಸ್ಥಿತಿ ಕುರಿತು ಚರ್ಚಿಸಲು, ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸೋನಿಯಾ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಆ ವೇಳೆ ಅವರು ಈ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ’ ಎಂದು ಕಾಂಗ್ರೆಸ್ನ ಮುಖ್ಯ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದ್ದಾರೆ.</p>.<p>ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಹ ಸಭೆಯಲ್ಲಿದ್ದರು.</p>.<p>‘ಸೋನಿಯಾಜಿ ಅವರು ಪ್ರಶ್ನಿಸಿದಂತೆ ಲಾಕ್ಡೌನ್ 3.0 ನಂತರ ಏನಾಗುತ್ತದೆ ಎನ್ನುವುದು ನಮಗೆ ತಿಳಿಯಬೇಕು. ದೇಶದಲ್ಲಿ ಲಾಕ್ಡೌನ್ ತೆರವುಗೊಳಿಸಲು ಕೇಂದ್ರ ಸರ್ಕಾರ ಯಾವ ಯೋಜನೆ ರೂಪಿಸುತ್ತಿದೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಬೇಕಿದೆ. ಸೋನಿಯಾಜಿ ಅವರು ಈಗಾಗಲೆ ಈ ವಿಷಯ ಪ್ರಸ್ತಾಪಿಸಿದ್ದಾರೆ’ ಎಂದು ಮನಮೋಹನ್ ಸಿಂಗ್ ಹೇಳಿದ್ದಾರೆ.</p>.<p>‘ದೆಹಲಿಯಲ್ಲಿರುವವರು ಪ್ರಾದೇಶಿಕವಾಗಿ ಏನಾಗುತ್ತಿದೆ ಎನ್ನುವುದರ ಅರಿವಿಲ್ಲದೆ ಕೋವಿಡ್-19 ವಲಯಗಳನ್ನು ವರ್ಗೀಕರಿಸುತ್ತಿದ್ದಾರೆ ಎನ್ನುವುದು ಕಳವಳದ ಸಂಗತಿ' ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಸಭೆಯಲ್ಲಿ ಹೇಳಿದ್ದಾರೆ.</p>.<p>‘ರಾಜ್ಯಗಳಿಗೆ ಆರ್ಥಿಕ ಪ್ಯಾಕೇಜ್ ನೀಡುವ ಕುರಿತು ಪ್ರಧಾನಿ ಒಂದು ಮಾತೂ ಆಡಿಲ್ಲ. ದೊಡ್ಡಮೊತ್ತದ ಪ್ಯಾಕೇಜ್ ನೀಡದ ಹೊರತು ರಾಜ್ಯಗಳು ಹಾಗೂ ದೇಶ ನಡೆಯುವುದು ಹೇಗೆ? ನಾವು 10 ಸಾವಿರ ಕೋಟಿ ಕಳೆದುಕೊಂಡಿದ್ದೇವೆ’ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>