ಸಲ್ಲಿಕೆಯಾದ ಅರ್ಜಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಬಳಿಕ ಪಕ್ಷದ ಹಿರಿಯ ಮುಖಂಡ ಮಧುಸೂಧನ್ ಮಿಸ್ತ್ರಿ ಅಧ್ಯಕ್ಷತೆಯ ಸ್ಕ್ರೀನಿಂಗ್
ಸಮಿತಿಗೆ ಕಳುಹಿಸಲಾಗುವುದು. ಈ ಸಮಿತಿಯಲ್ಲಿ ಸಂಸದರಾದ ತಮರಾಧ್ವಾಜ್ ಸಾಹು ಮತ್ತು ಗೌರವ್ ಗೊಗೋಯ್ ಇದ್ದಾರೆ. ಅಲ್ಲದೆ, ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಪರಮೇಶ್ವರ ಮತ್ತು ಸಿದ್ದರಾಮಯ್ಯ ಕೂಡಾ ಸದಸ್ಯರು ಎಂದೂ ಮೂಲಗಳು ತಿಳಿಸಿವೆ.