<p><strong>ಭೋಪಾಲ್:</strong> ಕಾಂಗ್ರೆಸ್ನ 16 ಬಂಡಾಯ ಶಾಸಕರ ರಾಜೀನಾಮೆ ಅಂಗೀಕಾರವಾದ ಬಳಿಕ ಬಹುಮತ ಕಳೆದುಕೊಂಡಿದ್ಡ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲನಾಥ್ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.ಇದರೊಂದಿಗೆ 15 ತಿಂಗಳ ಕಾಂಗ್ರೆಸ್ ಸರ್ಕಾರ ಪತನಗೊಂಡಿತು.</p>.<p>ಈ ಬೆಳವಣಿಗೆಯೊಂದಿಗೆ ರಾಜ್ಯದಲ್ಲಿ 17 ದಿನಗಳಿಂದ ಮೂಡಿದ್ದ ರಾಜಕೀಯ ಅನಿಶ್ಚಿತತೆ ನಿರ್ಣಾಯಕ ಹಂತ ತಲುಪಿದಂತಾಗಿದೆ. ಸದ್ಯ, ಶಾಸನಸಭೆಯಲ್ಲಿ ಅಗತ್ಯ ಸದಸ್ಯ ಬಲವುಳ್ಳ ಬಿಜೆಪಿಗೆ ಸರ್ಕಾರ ರಚಿಸುವ ಹಾದಿ ಸುಗಮವಾಗಿದೆ.</p>.<p>‘ಕಮಲನಾಥ್ ಅವರ ರಾಜೀನಾಮೆಯನ್ನು ರಾಜ್ಯಪಾಲ ಲಾಲ್ಜೀ ಟಂಡನ್ ಅಂಗೀಕರಿಸಿದ್ದು, ನೂತನ ಸರ್ಕಾರ ಅಸ್ತಿತ್ವಕ್ಕೆ ಬರುವವರೆಗೆ ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರಿ ಯಲು ಸೂಚಿಸಿದ್ದಾರೆ’ ಎಂದು ರಾಜಭವನದ ಪ್ರಕಟಣೆ ತಿಳಿಸಿದೆ.</p>.<p>ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಂತೆ ಪ್ರಕರಣ ಸುಪ್ರೀಂ ಕೋರ್ಟ್ ಮೇಟ್ಟಿಲೇರಿತ್ತು. ಶುಕ್ರವಾರವೇ ವಿಶ್ವಾಸಮತ ಪ್ರಕ್ರಿಯೆ ಪೂರ್ಣಗೊಳಿಸಲು ನ್ಯಾಯಪೀಠ ಸೂಚಿಸಿತ್ತು. ಆದರೆ, ವಿಶ್ವಾಸಮತ ಕೋರುವ ಮೊದಲೇ ಕಮಲನಾಥ್ ರಾಜೀನಾಮೆ ಸಲ್ಲಿಸಿದರು.</p>.<p>ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ್ದ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಅವರ ಬೆಂಬಲಿಗರಾಗಿದ್ದ 22 ಶಾಸಕರು, ಸರ್ಕಾರದ ವಿರುದ್ಧ ಬಂಡಾಯ ಎದ್ದಿದ್ದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಹಿಂದೆ ಆರು ಶಾಸಕರ ರಾಜೀನಾಮೆ ಅಂಗೀಕಾರವಾಗಿತ್ತು. ಉಳಿದ 16 ಶಾಸಕರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದುಗುರುವಾರ ತಡರಾತ್ರಿ ಸ್ಪೀಕರ್ ಪ್ರಕಟಿಸಿದ್ದರು.</p>.<p>ರಾಜೀನಾಮೆಗೂ ಮೊದಲು ರಾಜಕೀಯ ಬಿಕ್ಕಟ್ಟಿಗಾಗಿ ಬಿಜೆಪಿ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಅವರ ವಿರುದ್ಧ ಕಮಲನಾಥ್ ಹರಿಹಾಯ್ದರು. ‘ಕಳೆದ ಎರಡು ವಾರದ ಬೆಳವಣಿಗೆಗಳು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಕುಂದುತರುವ ಅಧ್ಯಾಯವಾಗಿತ್ತು’ ಎಂದು ಟೀಕಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಅವರು, ‘ಬಿಜೆಪಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕೊಂದಿದ್ದು, ತಮ್ಮ ನೇತೃತ್ವದ ಸರ್ಕಾರದ ವಿರುದ್ಧ ಸಂಚು ನಡೆಸಿತು. ರಾಜ್ಯದಲ್ಲಿನ ಪ್ರಸ್ತುತ ಬಿಕ್ಕಟ್ಟಿಗೆ ಪಕ್ಷದ ಮಾಜಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರೇ ಕಾರಣ’ ಎಂದೂ ಆರೋಪಿಸಿದರು.</p>.<p>ಸರ್ಕಾರದ ಪತನ ಕುರಿತು ಟ್ವೀಟ್ ಮಾಡಿರುವ ಜ್ಯೋತಿರಾದಿತ್ಯ ಸಿಂಧಿಯಾ ಅವರು, ‘ಇದು, ರಾಜ್ಯದ ಜನರ ಗೆಲುವು. ರಾಜಕಾರಣದ ಉದ್ದೇಶ ಜನರ ಸೇವೆಯಾಗಬೇಕು. ಆದರೆ, ಸರ್ಕಾರ ಜನರ ಸೇವೆಗೆ ಒತ್ತು ನೀಡಿರಲಿಲ್ಲ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್:</strong> ಕಾಂಗ್ರೆಸ್ನ 16 ಬಂಡಾಯ ಶಾಸಕರ ರಾಜೀನಾಮೆ ಅಂಗೀಕಾರವಾದ ಬಳಿಕ ಬಹುಮತ ಕಳೆದುಕೊಂಡಿದ್ಡ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲನಾಥ್ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.ಇದರೊಂದಿಗೆ 15 ತಿಂಗಳ ಕಾಂಗ್ರೆಸ್ ಸರ್ಕಾರ ಪತನಗೊಂಡಿತು.</p>.<p>ಈ ಬೆಳವಣಿಗೆಯೊಂದಿಗೆ ರಾಜ್ಯದಲ್ಲಿ 17 ದಿನಗಳಿಂದ ಮೂಡಿದ್ದ ರಾಜಕೀಯ ಅನಿಶ್ಚಿತತೆ ನಿರ್ಣಾಯಕ ಹಂತ ತಲುಪಿದಂತಾಗಿದೆ. ಸದ್ಯ, ಶಾಸನಸಭೆಯಲ್ಲಿ ಅಗತ್ಯ ಸದಸ್ಯ ಬಲವುಳ್ಳ ಬಿಜೆಪಿಗೆ ಸರ್ಕಾರ ರಚಿಸುವ ಹಾದಿ ಸುಗಮವಾಗಿದೆ.</p>.<p>‘ಕಮಲನಾಥ್ ಅವರ ರಾಜೀನಾಮೆಯನ್ನು ರಾಜ್ಯಪಾಲ ಲಾಲ್ಜೀ ಟಂಡನ್ ಅಂಗೀಕರಿಸಿದ್ದು, ನೂತನ ಸರ್ಕಾರ ಅಸ್ತಿತ್ವಕ್ಕೆ ಬರುವವರೆಗೆ ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರಿ ಯಲು ಸೂಚಿಸಿದ್ದಾರೆ’ ಎಂದು ರಾಜಭವನದ ಪ್ರಕಟಣೆ ತಿಳಿಸಿದೆ.</p>.<p>ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಂತೆ ಪ್ರಕರಣ ಸುಪ್ರೀಂ ಕೋರ್ಟ್ ಮೇಟ್ಟಿಲೇರಿತ್ತು. ಶುಕ್ರವಾರವೇ ವಿಶ್ವಾಸಮತ ಪ್ರಕ್ರಿಯೆ ಪೂರ್ಣಗೊಳಿಸಲು ನ್ಯಾಯಪೀಠ ಸೂಚಿಸಿತ್ತು. ಆದರೆ, ವಿಶ್ವಾಸಮತ ಕೋರುವ ಮೊದಲೇ ಕಮಲನಾಥ್ ರಾಜೀನಾಮೆ ಸಲ್ಲಿಸಿದರು.</p>.<p>ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ್ದ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಅವರ ಬೆಂಬಲಿಗರಾಗಿದ್ದ 22 ಶಾಸಕರು, ಸರ್ಕಾರದ ವಿರುದ್ಧ ಬಂಡಾಯ ಎದ್ದಿದ್ದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಹಿಂದೆ ಆರು ಶಾಸಕರ ರಾಜೀನಾಮೆ ಅಂಗೀಕಾರವಾಗಿತ್ತು. ಉಳಿದ 16 ಶಾಸಕರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದುಗುರುವಾರ ತಡರಾತ್ರಿ ಸ್ಪೀಕರ್ ಪ್ರಕಟಿಸಿದ್ದರು.</p>.<p>ರಾಜೀನಾಮೆಗೂ ಮೊದಲು ರಾಜಕೀಯ ಬಿಕ್ಕಟ್ಟಿಗಾಗಿ ಬಿಜೆಪಿ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಅವರ ವಿರುದ್ಧ ಕಮಲನಾಥ್ ಹರಿಹಾಯ್ದರು. ‘ಕಳೆದ ಎರಡು ವಾರದ ಬೆಳವಣಿಗೆಗಳು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಕುಂದುತರುವ ಅಧ್ಯಾಯವಾಗಿತ್ತು’ ಎಂದು ಟೀಕಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಅವರು, ‘ಬಿಜೆಪಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕೊಂದಿದ್ದು, ತಮ್ಮ ನೇತೃತ್ವದ ಸರ್ಕಾರದ ವಿರುದ್ಧ ಸಂಚು ನಡೆಸಿತು. ರಾಜ್ಯದಲ್ಲಿನ ಪ್ರಸ್ತುತ ಬಿಕ್ಕಟ್ಟಿಗೆ ಪಕ್ಷದ ಮಾಜಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರೇ ಕಾರಣ’ ಎಂದೂ ಆರೋಪಿಸಿದರು.</p>.<p>ಸರ್ಕಾರದ ಪತನ ಕುರಿತು ಟ್ವೀಟ್ ಮಾಡಿರುವ ಜ್ಯೋತಿರಾದಿತ್ಯ ಸಿಂಧಿಯಾ ಅವರು, ‘ಇದು, ರಾಜ್ಯದ ಜನರ ಗೆಲುವು. ರಾಜಕಾರಣದ ಉದ್ದೇಶ ಜನರ ಸೇವೆಯಾಗಬೇಕು. ಆದರೆ, ಸರ್ಕಾರ ಜನರ ಸೇವೆಗೆ ಒತ್ತು ನೀಡಿರಲಿಲ್ಲ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>