ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಧಿ ಹತ್ಯೆ ಮರುಸೃಷ್ಟಿ ವಿರುದ್ಧ ಪ್ರತಿಭಟನೆ

Last Updated 3 ಫೆಬ್ರುವರಿ 2019, 18:40 IST
ಅಕ್ಷರ ಗಾತ್ರ

ನವದೆಹಲಿ:ಮಹಾತ್ಮ ಗಾಂಧಿ ಅವರ ಹತ್ಯೆಯನ್ನು ಮರುಸೃಷ್ಟಿಸಿದ ಅಖಿಲ ಭಾರತ ಹಿಂದೂ ಮಹಾಸಭಾದ ನಡೆಯ ವಿರುದ್ಧ ಕಾಂಗ್ರೆಸ್ ಸೋಮವಾರ (ಫೆ.4) ದೇಶದಾದ್ಯಂತ ಪ್ರತಿಭಟನೆ ನಡೆಸಲಿದೆ.

1948ರ ಜನವರಿ 30ರಂದು ನಾಥೂರಾಮ್ ಗೋಡ್ಸೆಯಿಂದ ಮಹಾತ್ಮ ಗಾಂಧಿ ಅವರ ಹತ್ಯೆ ನಡೆದಿತ್ತು. ಹೀಗಾಗಿ ಪ್ರತಿ ಜನವರಿ 30ರಂದು ದೇಶದಾದ್ಯಂತ ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ.

ಆದರೆ ಉತ್ತರ ಪ್ರದೇಶದ ಅಲಿಗಡದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿ ಪೂಜಾ ಶಕುನ್ ಪಾಂಡೆ ಅವರು ಇದೇ ಜನವರಿ 30ರಂದು ಗಾಂಧಿಯ ಪ್ರತಿಕೃತಿಗೆ ಗುಂಡಿಕ್ಕಿದ್ದರು. ನಂತರ ಗೋಡ್ಸೆಯ ಪ್ರತಿಕೃತಿಗೆ ಮಾಲಾರ್ಪಣೆ ಮಾಡಿದ್ದರು.

ಇದರ ವಿರುದ್ಧ ಎಲ್ಲಾ ರಾಜ್ಯಗಳಲ್ಲಿ ಏಕಕಾಲದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT