ಉತ್ತರ ಪ್ರದೇಶ ಪೊಲೀಸರ ಕ್ರಮವನ್ನು ಖಂಡಿಸಿರುವ ಪ್ರಿಯಾಂಕಾ, ‘ನನ್ನ ಸುರಕ್ಷತೆ ಮುಖ್ಯ ಸಮಸ್ಯೆ ಅಲ್ಲ. ನಾವು ಸಾಮಾನ್ಯ ನಾಗರಿಕರ ಸುರಕ್ಷತೆ ಬಗ್ಗೆ ಮಾತನಾಡುತ್ತಿದ್ದೇವೆ. ನಮಗೆ ತಿಳಿದಿರುವ ಹಾಗೆ 5500 ಜನರನ್ನು ಬಂಧಿಸಲಾಗಿದೆ. ಹಲವರನ್ನು ಜೈಲಿಗೆ ತಳ್ಳಿ ಕೆಟ್ಟ ರೀತಿಯಲ್ಲಿ ನಡೆಸಿಕೊಳ್ಳಲಾಗಿದೆ. ಉತ್ತರ ಪ್ರದೇಶ ಪೊಲೀಸರು ಮತ್ತು ಅಲ್ಲಿನ ಆಡಳಿತ ತಪ್ಪು ಕಾರ್ಯಗಳಲ್ಲಿ ನಿರತವಾಗಿವೆ‘ ಎಂದು ತಿಳಿಸಿದ್ದಾರೆ.