ನವದೆಹಲಿ: ‘ಜೀವವಿಮಾ ನಿಗಮವನ್ನು (ಎಲ್ಐಸಿ) ಹಾಳುಮಾಡುವ ಮೂಲಕ ಕೇಂದ್ರ ಸರ್ಕಾರ ಜನರ ಜೀವನವನ್ನು ಅಪಾಯಕ್ಕೆ ದೂಡುತ್ತಿದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಎಲ್ಐಸಿಯ ‘ವಸೂಲಾಗದ ಸಾಲ’ದ (ಎನ್ಪಿಎ) ಮೊತ್ತ ಐದು ವರ್ಷಗಳಲ್ಲಿ ದುಪ್ಪಟ್ಟಾಗಿ ₹ 30 ಸಾವಿರ ಕೋಟಿ ತಲುಪಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಈ ಹಿನ್ನೆಲೆಯಲ್ಲಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್, ‘ಎಲ್ಐಸಿಯನ್ನು ನಂಬಿ ಕೋಟ್ಯಂತರ ಜನರು ಅಲ್ಲಿ ಹೂಡಿಕೆ ಮಾಡುತ್ತಾರೆ. ಆದರೆ ಈ ನಂಬಿಕೆಯನ್ನು ಮೋದಿ ಸರ್ಕಾರ ಹಾಳುಮಾಡುತ್ತಿದೆ’ ಎಂದು ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.