ವಯನಾಡು(ಕೇರಳ): ದೇಶದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣ ಮತ್ತು ಸರ್ಕಾರಿ ಸಂಸ್ಥೆಗಳ ದುರುಪಯೋಗದ ಬಗ್ಗೆ ಕೇರಳದಲ್ಲಿ ಇಂದು ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೇರ ವಾಗ್ದಾಳಿ ನಡೆಸಿದರು.
ವಯನಾಡಿನ ಪ್ರವಾಸದಲ್ಲಿರುವ ರಾಹುಲ್ ಗಾಂಧಿ, ‘ಭಾರತವು ಜಗತ್ತಿನ ಅತ್ಯಾಚಾರ ರಾಜಧಾನಿ ಎಂದುಹೆಸರಾಗಿದೆ. ಹೆಣ್ಣುಮಕ್ಕಳನ್ನು ಮತ್ತು ಸಹೋದರಿಯರನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದು ಭಾರತಕ್ಕೆ ಏಕೆ ಸಾಧ್ಯವಾಗುತ್ತಿಲ್ಲ ಎಂದು ಹೊರ ದೇಶಗಳು ಕೇಳುತ್ತಿವೆ,’ ಎಂದು ತಿಳಿಸಿದರು.
#WATCH Rahul Gandhi in Wayanad,Kerala: India is known as the rape capital of the world. Foreign nations are asking the question why India is unable to look after its daughters & sisters. A UP MLA of BJP is involved in rape of a woman & the Prime Minister doesn't say a single word pic.twitter.com/FOE35sflGT
— ANI (@ANI) December 7, 2019
ದೇಶವನ್ನು ನಡೆಸುತ್ತಿರುವ ವ್ಯಕ್ತಿಗೆ ಹಿಂಸೆಯಲ್ಲಿ ನಂಬಿಕೆ ಇದೆ ಎಂದಿರುವ ರಾಹುಲ್, ‘ದೇಶದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಹೆಚ್ಚುತ್ತಿರುವುದು, ಸರ್ಕಾರಿ ಸಂಸ್ಥೆಗಳು ದುರುಪಯೋಗವಾಗುತ್ತಿರುವುದು, ಜನರು ಕಾನೂನನ್ನು ಕೈಗೆ ಎತ್ತಿಕೊಳ್ಳುವುದರ ಹಿಂದೆ ಒಂದು ಕಾರಣವಿದೆ. ದೇಶವನ್ನು ನಡೆಸುತ್ತಿರುವ ವ್ಯಕ್ತಿಹಿಂಸೆಯಲ್ಲಿ ನಂಬಿಕೆ ಹೊಂದಿದ್ದಾರೆ,’ ಎಂದು ಆಕ್ರೋಶ ವ್ಯಕ್ತಪಡಿಸಿದರು.
Rahul Gandhi, Congress: There is a reason for this breakdown of our institutional structures, a reason that people are taking law into their own hands. It is because the man who is running this country believes in violence & indiscriminate power. https://t.co/cAUda4kLhD pic.twitter.com/dQ9rIvUdy4
— ANI (@ANI) December 7, 2019
‘ಮಹಿಳೆಯರ ಅತ್ಯಾಚಾರ, ಕಿರುಕುಳ, ದೌರ್ಜನ್ಯಗಳಂತಹ ಪ್ರಕರಣಗಳ ಬಗ್ಗೆ ಪ್ರತಿದಿನವೂ ನಾವು ಓದುತ್ತಿದ್ದೇವೆ. ದಲಿತರ ಮೇಲೆ ಹಲ್ಲೆ, ಬುಡಕಟ್ಟು ಜನಾಂಗದವರ ಮೇಲೆ ದಾಳಿಗಳಾಗುತ್ತಿವೆ. ಉನ್ನಾವ್ ಪ್ರಕರಣದಲ್ಲಿ ಉತ್ತರ ಪ್ರದೇಶದ ಬಿಜೆಪಿ ಶಾಸಕರೊಬ್ಬರು ಪ್ರಮುಖ ಆರೋಪಿ,’ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.