ಇದುವರೆಗೂ ಮುಂಬೈನಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದ ಕಾಂಗ್ರೆಸ್ ಶಾಸಕರು ಇದೀಗ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರದ ಕಾಂಗ್ರೆಸ್ ಹಿರಿಯ ನಾಯಕರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ. ಈ ಮೂಲಕ ಶಿವಸೇನಾಗೆ ಕಾಂಗ್ರೆಸ್ ಬಾಹ್ಯ ಬೆಂಬಲ ನೀಡುವುದರೊಂದಿಗೆ ಸರ್ಕಾರ ರಚನೆಯಿಂದ ಬಿಜೆಪಿಯನ್ನು ಹೊರಗಿಡಲು ಯೋಜನೆ ರೂಪಿಸಿದ್ದಾರೆ.