ಮಧ್ಯಪ್ರದೇಶದ ಬೆಳವಣಿಗೆಗಳ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ಶಾಸಕರು ದೈಹಿಕವಾಗಿ ಸಭಾಧ್ಯಕ್ಷರ ಮುಂದೆ ಹಾಜರಾಗಬೇಕು. ಅಲ್ಲದೆ, ಅವರೇ ಖುದ್ದು ಸಭಾಧ್ಯಕ್ಷರ ಮುಂದೆ ವಿವರಣೆ ನೀಡುವವರೆಗೂ ರಾಜೀನಾಮೆ ಅಂಗೀಕಾರವಾಗುವುದಿಲ್ಲ ಎಂದು ಸಿಂಗ್ ತಿಳಿಸಿದ್ದಾರೆ.ಯಾವುದೇ ಕಾರಣಕ್ಕೂ ವಿಶ್ವಾಸ ಮತ ಯಾಚನೆ ಪ್ರಶ್ನೆಯೇ ಇಲ್ಲ. ಯಾಕೆಂದರೆ, 19 ಮಂದಿ ಶಾಸಕರ ರಾಜೀನಾಮೆಯೇ ಅಂಗೀಕಾರವಾಗಿಲ್ಲ ಎಂದು ಅವರು ಹೇಳಿದ್ದಾರೆ.