ಶುಕ್ರವಾರ ಪುಣೆಯಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ್ದ ಗೋಯಲ್, ‘ಅಭಿಜಿತ್ ಅವರು ಕಾಂಗ್ರೆಸ್ನ ನ್ಯಾಯ್ (ಲೋಕಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಪ್ರಕಟಿಸಿದ್ದ ಬಡತನ ನಿರ್ಮೂಲನೆ ಯೋಜನೆ) ಅನ್ನು ಬೆಂಬಲಿಸಿದ್ದರು. ಆದರೆ, ಭಾರತದ ಜನರು ಅವರ ಸಿದ್ಧಾಂತವನ್ನು ತಿರಸ್ಕರಿಸಿದ್ದಾರೆ’ ಎಂದು ಹೇಳಿದ್ದರು.