ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಿತ್‌ ಶಾ ರಾಜೀನಾಮೆಗೆ ಪಟ್ಟು: ಕಾಂಗ್ರೆಸ್‌, ಟಿಎಂಸಿ, ಎಎಪಿ ಪ್ರತಿಭಟನೆ

Last Updated 2 ಮಾರ್ಚ್ 2020, 6:33 IST
ಅಕ್ಷರ ಗಾತ್ರ

ನವದೆಹಲಿ: ಸಂಸತ್‌ ಕಲಾಪ ಆರಂಭಕ್ಕೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದೆ.

ರಾಹುಲ್ ಗಾಂಧಿ, ಶಶಿ ತರೂರ್‌ ಮತ್ತು ಅಧಿರಂಜನ್‌ ಚೌಧರಿ ಸೇರಿದಂತೆ ಕಾಂಗ್ರೆಸ್‌ನ ಸಂಸದರು ಸಂಸತ್‌ ಭವನದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರವನ್ನು ತಡೆಗಟ್ಟಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿಫಲರಾಗಿದ್ದಾರೆ. ಕಾರಣ, ಅವರು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್‌ ಒತ್ತಾಯಿಸಿದೆ.

ದೆಹಲಿ ಗಲಭೆ ವಿಚಾರವಾಗಿ ಟಿಎಂಸಿ ಮತ್ತು ಎಎಪಿ ಸಂಸದರು ಕೇಂದ್ರ‌ ಸರ್ಕಾರದ ವಿರುದ್ಧ ಸಂಸತ್‌ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಎರಡನೇ ಹಂತದ ಅಧಿವೇಶನ ಇಂದು ಆರಂಭವಾಗಿದ್ದು, ಸಂಸತ್‌ನ ಉಭಯ ಸದನಗಳಲ್ಲಿ ವಿಪಕ್ಷಗಳು ದೆಹಲಿ ಹಿಂಸಾಚಾರ ಕುರಿತು ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಳ್ಳಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT