ನವದೆಹಲಿ: ಪುಲ್ವಾಮ ಉಗ್ರ ದಾಳಿಯಲ್ಲಿ ಮಡಿದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರ ಪುತ್ರ ವಿರೇಂದ್ರ ರಾವತ್ ಅವರ ಮೈ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ನೋಟು ಎಸೆಯುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ವಿರೇಂದ್ರ ರಾವತ್ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ಅವರ ಮೇಲೆ ನೋಟುಗಳನ್ನ ಎಸೆಯುತ್ತಿದ್ದಾರೆ.ಇತ್ತ ಇಬ್ಬರು ಗಾಯಕರು ಭಜನೆ ಹಾಡುತ್ತಿರುವುದು ವಿಡಿಯೊದಲ್ಲಿದೆ. ಉತ್ತರಾಖಂಡದ ರೂರ್ಕಿಯಲ್ಲಿ ಆ ಘಟನೆ ನಡೆದಿದೆ.
#WATCH Congress party workers shower currency notes on Congress leader Virendra Rawat (Former Uttarakhand CM Harish Rawat's son), at tribute ceremony in Roorkee organised by the Party for the CRPF soldiers who lost their life in Pulwama terrorist attack. (22 Feb) pic.twitter.com/3NHn8aTCkB
ಇತ್ತೀಚೆಗೆ ಹುತಾತ್ಮಯೋಧನ ಅಂತಿಮ ಯಾತ್ರೆ ವೇಳೆ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ನಗುತ್ತಾ ಕೈ ಬೀಸಿದ್ದು ಟೀಕೆಗೊಳಗಾಗಿತ್ತು.ಕೇರಳದಲ್ಲಿ ಹುತಾತ್ಮ ಯೋಧನ ಪಾರ್ಥೀವ ಶರೀರದ ಮುಂದೆ ನಿಂತು ಸೆಲ್ಫಿ ಕ್ಲಿಕ್ಕಿಸಿದ್ದೂ ವಿವಾದವಾಗಿತ್ತು.