ವಿರುಧುನಗರ ಜಿಲ್ಲೆಯಲ್ಲಿ ಶನಿವಾರ ಕಾಂಗ್ರೆಸ್ ಸಮಾವೇಶ ಆಯೋಜನೆಗೊಂಡಿತ್ತು. ಈ ಸಮಾವೇಶದ ಅಧ್ಯಕ್ಷತೆಯನ್ನು ತಮಿಳುನಾಡು ಪ್ರದೇಶ ಕಾಂಗ್ರೆಸ್ನಅಧ್ಯಕ್ಷ ಕೆ.ಎಸ್. ಅಳಗಿರಿವಹಿಸಿಕೊಂಡಿದ್ದರು. ಈ ಸಮಾವೇಶದಲ್ಲಿ ಖಾಲಿ ಕುರ್ಚಿಗಳಿರುವ ಕಡೆಛಾಯಾಗ್ರಾಹಕ ಆರ್.ಎಂ ಮುತ್ತುರಾಜ್ ಅವರು ಚಿತ್ರ ಸೆರೆ ಹಿಡಿಯುತ್ತಿದ್ದರು. ಆಗ ಕಾಂಗ್ರೆಸ್ ಕಾರ್ಯಕರ್ತರುದಾಳಿ ನಡೆಸಿದ್ದಾರೆ. ಅಲ್ಲದೆ, ಮುತ್ತುರಾಜ್ ಅವರ ಕ್ಯಾಮೆರಾ ಕಸಿಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಅಲ್ಲೇ ಇದ್ದ ಕೆಲ ಪತ್ರಕರ್ತರು ಮಧ್ಯಪ್ರವೇಶ ಮಾಡಿ ಮುತ್ತುರಾಜ್ ಅವರಿಗೆ ನೆರವಾಗಿದ್ದಾರೆ.ಈ ದೃಶ್ಯಾವಳಿ ಸದ್ಯ ತಮಿಳುನಾಡಿನಾದ್ಯಂತ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.