ವಿವಿಧ ಭಾಗಗಳಿಂದ ಸಹಸ್ರಾರು ಭಕ್ತರು ಬಂದಿದ್ದರು. ಭಕ್ತರಿಂದ ಬೆಟ್ಟ ತುಂಬಿ ತುಳುಕುತ್ತಿತ್ತು. ದೇವಿಗೆ ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಕಂಡುಬಂತು. ಬೆಟ್ಟ ಏರಿ ಆಯಾಸಗೊಂಡಿದ್ದ ಭಕ್ತರಿಗೆ ಪಾನಕ ವಿತರಿಸಲಾಯಿತು.ಬಸವಾಪಟ್ಟಣ, ಸುತ್ತಲಿನ ಗ್ರಾಮಗಳ ಜನ ವರ್ಣರಂಜಿತ ಕಮಾನು ಬಂಡಿಗಳಲ್ಲಿ ಪಾನಕದ ಹಂಡೆಗಳನ್ನು ತುಂಬಿಕೊಂಡು ಬಂದಿದ್ದರು. ಎತ್ತಿನ ಬಂಡಿಗಳು ಏರು ಬೆಟ್ಟವನ್ನು ಹತ್ತುತ್ತಿದ್ದ ದೃಶ್ಯ ರೋಮಾಂಚನಕಾರಿಯಾಗಿತ್ತು. ಶನಿವಾರ ದೇವಿಯ ಭಂಡಾರ ತಣಿಗೆ ಉತ್ಸವ ನಡೆಯಲಿದ್ದು, ದೇವಸ್ಥಾನ ಸಮಿತಿ ಸಿದ್ಧತೆ ನಡೆಸಿದೆ.