<p><strong>ಶ್ರೀನಗರ:</strong>ಕೇಂದ್ರ ಸರ್ಕಾರದ ಆಡಳಿತ ವೈಫಲ್ಯದ ಬಗ್ಗೆ ದೇಶದ ಗಮನ ಸೆಳೆಯಲು<strong>ಯುವ ಕ್ರಾಂತಿ ಯಾತ್ರೆ</strong> ನಡೆಸುತ್ತಿರುವ ಕಾಂಗ್ರೆಸ್ ಯುವ ಘಟಕ, ಜಮ್ಮು ಕಾಶ್ಮೀರದ ಶ್ರೀನಗರದಲ್ಲಿರುವ ಲಾಲ್ ಚೌಕ್ನಲ್ಲಿ ರಾಷ್ಟ್ರ ಧ್ವಜ ಹಾರಿಸಲು ಯೋಜಿಸಿದೆ.</p>.<p>ಭಾರತೀಯ ಯುವ ಕಾಂಗ್ರೆಸ್ ಘಟಕದ(ಐವೈಸಿ) ಅಧ್ಯಕ್ಷ ಕೇಶವ್ ಚಂದ್ರ ಯಾದವ್ ಹಾಗೂ ಉಪಾಧ್ಯಕ್ಷ ಶ್ರೀನಿವಾಸ್ ಬಿ.ವಿ. ನೇತೃತ್ವದಲ್ಲಿ ಕನ್ಯಾಕುಮಾರಿಯಿಂದಡಿಸೆಂಬರ್ 16ರಂದುಯುವ ಕ್ರಾಂತಿ ಯಾತ್ರೆ ಆರಂಭವಾಗಿದೆ. ಜನವರಿ 30ಕ್ಕೆ ನವದೆಹಲಿ ತಲುಪಲಿದ್ದು, ಬೃಹತ್ ಕಾರ್ಯಕ್ರಮ ಆಯೋಜಿಸಲು ಯೋಜನೆ ರೂಪಿಸಲಾಗಿದೆ.</p>.<p>ಲಾಲ್ ಚೌಕ್ನಲ್ಲಿ ರಾಷ್ಟ್ರಧ್ವಜ ಹಾರಿಸುವ ಕುರಿತು ಐವೈಸಿ ವಕ್ತಾರ ಅಮ್ರೀಶ್ ರಂಜನ್ ಪಾಂಡೆ ಮಾಹಿತಿ ನೀಡಿದ್ದಾರೆ.</p>.<p>‘ನಾವು ಪಾಕಿಸ್ತಾನದಲ್ಲಿ ಬಿರಿಯಾನಿ ಸೇವಿಸಲು ಹೋಗುತ್ತಿಲ್ಲ. ಚೈತನ್ಯಯುತ ಯುವ ಸಮುದಾಯದೊಂದಿಗೆರಾಷ್ಟ್ರ ವಿರೋಧಿ ಶಕ್ತಿಗಳನ್ನು ತೋರಿಸಲಿದ್ದೇವೆ’ ಎಂದು ಪಾಂಡೆ ಹೇಳಿದ್ದಾರೆ.</p>.<p>‘ನಮ್ಮ ಯಾತ್ರೆ ಕನ್ಯಾಕುಮಾರಿಯಿಂದ ಆರಂಭವಾಗಿದೆ.ಈಗಾಗಲೇ ಸುಮಾರು 9 ಸಾವಿರ ಕಿ.ಮೀ ಸಾಗಿದ್ದೇವೆ. ಸದ್ಯ ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಸಂಚರಿಸಿದ್ದು, ಪಂಜಾಬ್ ಮೂಲಕ ಜಮ್ಮು ಕಾಶ್ಮೀರ ತಲುಪಲಿದ್ದೇವೆ’ ಎಂದರು.</p>.<p>‘ಬಾವುಟ ಹಾರಿಸುವ ಮೂಲಕ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಸಾರಲಿದ್ದೇವೆ. ಕೆಲವು ರಾಜಕೀಯ ಪಕ್ಷಗಳ ನಾಯಕರುಕಾಶ್ಮೀರ ಯುವಕರ ಕುರಿತು ಮಾಡುತ್ತಿರುವ ಅಪಪ್ರಚಾರದ ಬದಲಾಗಿ, ಇಲ್ಲಿನ ಯುವ ಸಮುದಾಯ ಹೊಂದಿರುವ ರಾಷ್ಟ್ರೀಯ ಭಾವನೆಯನ್ನು ಬಿಂಬಿಸಲಿದ್ದೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong>ಕೇಂದ್ರ ಸರ್ಕಾರದ ಆಡಳಿತ ವೈಫಲ್ಯದ ಬಗ್ಗೆ ದೇಶದ ಗಮನ ಸೆಳೆಯಲು<strong>ಯುವ ಕ್ರಾಂತಿ ಯಾತ್ರೆ</strong> ನಡೆಸುತ್ತಿರುವ ಕಾಂಗ್ರೆಸ್ ಯುವ ಘಟಕ, ಜಮ್ಮು ಕಾಶ್ಮೀರದ ಶ್ರೀನಗರದಲ್ಲಿರುವ ಲಾಲ್ ಚೌಕ್ನಲ್ಲಿ ರಾಷ್ಟ್ರ ಧ್ವಜ ಹಾರಿಸಲು ಯೋಜಿಸಿದೆ.</p>.<p>ಭಾರತೀಯ ಯುವ ಕಾಂಗ್ರೆಸ್ ಘಟಕದ(ಐವೈಸಿ) ಅಧ್ಯಕ್ಷ ಕೇಶವ್ ಚಂದ್ರ ಯಾದವ್ ಹಾಗೂ ಉಪಾಧ್ಯಕ್ಷ ಶ್ರೀನಿವಾಸ್ ಬಿ.ವಿ. ನೇತೃತ್ವದಲ್ಲಿ ಕನ್ಯಾಕುಮಾರಿಯಿಂದಡಿಸೆಂಬರ್ 16ರಂದುಯುವ ಕ್ರಾಂತಿ ಯಾತ್ರೆ ಆರಂಭವಾಗಿದೆ. ಜನವರಿ 30ಕ್ಕೆ ನವದೆಹಲಿ ತಲುಪಲಿದ್ದು, ಬೃಹತ್ ಕಾರ್ಯಕ್ರಮ ಆಯೋಜಿಸಲು ಯೋಜನೆ ರೂಪಿಸಲಾಗಿದೆ.</p>.<p>ಲಾಲ್ ಚೌಕ್ನಲ್ಲಿ ರಾಷ್ಟ್ರಧ್ವಜ ಹಾರಿಸುವ ಕುರಿತು ಐವೈಸಿ ವಕ್ತಾರ ಅಮ್ರೀಶ್ ರಂಜನ್ ಪಾಂಡೆ ಮಾಹಿತಿ ನೀಡಿದ್ದಾರೆ.</p>.<p>‘ನಾವು ಪಾಕಿಸ್ತಾನದಲ್ಲಿ ಬಿರಿಯಾನಿ ಸೇವಿಸಲು ಹೋಗುತ್ತಿಲ್ಲ. ಚೈತನ್ಯಯುತ ಯುವ ಸಮುದಾಯದೊಂದಿಗೆರಾಷ್ಟ್ರ ವಿರೋಧಿ ಶಕ್ತಿಗಳನ್ನು ತೋರಿಸಲಿದ್ದೇವೆ’ ಎಂದು ಪಾಂಡೆ ಹೇಳಿದ್ದಾರೆ.</p>.<p>‘ನಮ್ಮ ಯಾತ್ರೆ ಕನ್ಯಾಕುಮಾರಿಯಿಂದ ಆರಂಭವಾಗಿದೆ.ಈಗಾಗಲೇ ಸುಮಾರು 9 ಸಾವಿರ ಕಿ.ಮೀ ಸಾಗಿದ್ದೇವೆ. ಸದ್ಯ ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಸಂಚರಿಸಿದ್ದು, ಪಂಜಾಬ್ ಮೂಲಕ ಜಮ್ಮು ಕಾಶ್ಮೀರ ತಲುಪಲಿದ್ದೇವೆ’ ಎಂದರು.</p>.<p>‘ಬಾವುಟ ಹಾರಿಸುವ ಮೂಲಕ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಸಾರಲಿದ್ದೇವೆ. ಕೆಲವು ರಾಜಕೀಯ ಪಕ್ಷಗಳ ನಾಯಕರುಕಾಶ್ಮೀರ ಯುವಕರ ಕುರಿತು ಮಾಡುತ್ತಿರುವ ಅಪಪ್ರಚಾರದ ಬದಲಾಗಿ, ಇಲ್ಲಿನ ಯುವ ಸಮುದಾಯ ಹೊಂದಿರುವ ರಾಷ್ಟ್ರೀಯ ಭಾವನೆಯನ್ನು ಬಿಂಬಿಸಲಿದ್ದೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>