ತಿಹಿದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ದೌಲತ್ಪುರ್ ಗ್ರಾಮದ ಜನರು ಚುನಾವಣೆ ಮುಗಿದ ನಂತರ ಸಂಭ್ರಮಾಚರಣೆಗಾಗಿ ಸ್ಥಳೀಯ ಮಾರುಕಟ್ಟೆಯಿಂದ ಮದ್ಯ ಖರೀದಿಸಿದ್ದರು. ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಡಳಿತ ಆದೇಶ ನೀಡಿದೆ.
ಮದ್ಯ ಸೇವಿಸಿ ಸಾವು ಸಂಭವಿಸಿದ ಪ್ರಕರಣದಿಂದ ರೊಚ್ಚಿಗೆದ್ದ ಗ್ರಾಮಸ್ಥರು ಭದ್ರಕ್ ಚಂದಬಲಿ ರಸ್ತೆ ತಡೆಯೊಡ್ಡಿ ವಾಹನ ದಟ್ಟಣೆಯುಂಟು ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.