‘ನಿಂಬಾಳ್ಕರ್ ಕೊಲೆ ಬಗ್ಗೆ ಅಣ್ಣಾ ಹಜಾರೆ ಅವರಿಗೆ ಮಾಹಿತಿ ಇತ್ತು. ಹಾಗಾಗಿ ಅವರನ್ನು ಸಾಕ್ಷಿಯಾಗಿ ಪರಿಗಣಿಸಿ, ವಿಚಾರಣೆ ನಡೆಸಬೇಕು,’ ಎಂದು ಮೃತ ನಿಂಬಾಳ್ಕರ್ ಪತ್ನಿ ಆನಂದಿದೇವಿ ಅವರು ನ್ಯಾಯಾಲಯವನ್ನು ಕೋರಿದ್ದರು. ಆದರೆ, ಅದನ್ನು ಬಾಂಬೆ ಹೈಕೋರ್ಟ್ ತಳ್ಳಿ ಹಾಕಿತ್ತು. ನಂತರ ಆನಂದಿದೇವಿ ಅವರು ಸುಪ್ರೀಂ ಕೋರ್ಟ್ಗೆ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಅಣ್ಣಾ ಹಜಾರೆ ಅವರನ್ನೂ ಸಾಕ್ಷಿಯಾಗಿ ಪರಿಗಣಿಸುವಂತೆ ತಿಳಿಸಿತ್ತು.