<p><strong>ನಾಗಪುರ</strong>: ಗಣರಾಜ್ಯೋತ್ಸವ ದಿನ ದೇಶಭಕ್ತಿ ಗೀತೆಯೊಂದಕ್ಕೆ ಮಕ್ಕಳು ನೃತ್ಯ ಮಾಡುವಾಗ ಅವರ ಮೇಲೆ ಹಣವನ್ನು ತೂರಿದ್ದ ಹೆಡ್ ಕಾನ್ಸ್ಟೆಬಲ್ನನ್ನು ಮಂಗಳವಾರ ಅಮಾನತು ಮಾಡಲಾಗಿದೆ.</p>.<p>ನಾಗಪುರದ ಭೀವಾಪುರ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದಹೆಡ್ ಕಾನ್ಸ್ಟೆಬಲ್ ಪ್ರಮೋದ್ ವಾಲ್ಕೆ ಸೇವೆಯಿಂದ ಅಮಾನತುಗೊಂಡಿದ್ದಾರೆ.ಇಲ್ಲಿನ ಸ್ಥಳೀಯ ಸರ್ಕಾರಿ ಶಾಲೆಯಲ್ಲಿ ಜನವರಿ 26ರಂದು ಗಣರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿತ್ತು. ವೇದಿಕೆಯಲ್ಲಿ ಮಕ್ಕಳುದೇಶಭಕ್ತಿ ಗೀತೆಗೆ ಹೆಜ್ಜೆ ಹಾಕುತ್ತಿದ್ದರು. ಈ ವೇಳೆ ವೇದಿಕೆಗೆ ಬಂದ ಪ್ರಮೋದ್ ವಾಲ್ಕೆ ಮಕ್ಕಳ ಮೇಲೆ ಹಣವನ್ನು ತೂರಿ ಸಂಭ್ರಮಿಸಿದ್ದರು. ಈ ದೃಶ್ಯವನ್ನು ಮೊಬೈಲ್ನಲ್ಲಿ ಚಿತ್ರಿಕರಿಸಿದ್ದ ಕೆಲವರು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದರು.</p>.<p>ಪ್ರಮೋದ್ ವಾಲ್ಕೆ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಪೊಲೀಸರೇ ಇದು ಶಾಲಾ ಕಾರ್ಯಕ್ರಮ, ಬಾರ್ ಡ್ಯಾನ್ಸ್ ಅಲ್ಲ ಎಂದು ಕೆಲವರು ಸಾಮಾಜಿಕಜಾಲತಾಣಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು.</p>.<p>ಈ ಘಟನೆಯಿಂದ ಮುಜುಗರಕ್ಕೆ ಒಳಗಾಗಿದ್ದ ಮಹಾರಾಷ್ಟ್ರ ಪೊಲೀಸರು ಪ್ರಮೋದ್ ವಾಲ್ಕೆಯನ್ನು ಸೇವೆಯಿಂದ ಅಮಾನತು ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಪುರ</strong>: ಗಣರಾಜ್ಯೋತ್ಸವ ದಿನ ದೇಶಭಕ್ತಿ ಗೀತೆಯೊಂದಕ್ಕೆ ಮಕ್ಕಳು ನೃತ್ಯ ಮಾಡುವಾಗ ಅವರ ಮೇಲೆ ಹಣವನ್ನು ತೂರಿದ್ದ ಹೆಡ್ ಕಾನ್ಸ್ಟೆಬಲ್ನನ್ನು ಮಂಗಳವಾರ ಅಮಾನತು ಮಾಡಲಾಗಿದೆ.</p>.<p>ನಾಗಪುರದ ಭೀವಾಪುರ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದಹೆಡ್ ಕಾನ್ಸ್ಟೆಬಲ್ ಪ್ರಮೋದ್ ವಾಲ್ಕೆ ಸೇವೆಯಿಂದ ಅಮಾನತುಗೊಂಡಿದ್ದಾರೆ.ಇಲ್ಲಿನ ಸ್ಥಳೀಯ ಸರ್ಕಾರಿ ಶಾಲೆಯಲ್ಲಿ ಜನವರಿ 26ರಂದು ಗಣರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿತ್ತು. ವೇದಿಕೆಯಲ್ಲಿ ಮಕ್ಕಳುದೇಶಭಕ್ತಿ ಗೀತೆಗೆ ಹೆಜ್ಜೆ ಹಾಕುತ್ತಿದ್ದರು. ಈ ವೇಳೆ ವೇದಿಕೆಗೆ ಬಂದ ಪ್ರಮೋದ್ ವಾಲ್ಕೆ ಮಕ್ಕಳ ಮೇಲೆ ಹಣವನ್ನು ತೂರಿ ಸಂಭ್ರಮಿಸಿದ್ದರು. ಈ ದೃಶ್ಯವನ್ನು ಮೊಬೈಲ್ನಲ್ಲಿ ಚಿತ್ರಿಕರಿಸಿದ್ದ ಕೆಲವರು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದರು.</p>.<p>ಪ್ರಮೋದ್ ವಾಲ್ಕೆ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಪೊಲೀಸರೇ ಇದು ಶಾಲಾ ಕಾರ್ಯಕ್ರಮ, ಬಾರ್ ಡ್ಯಾನ್ಸ್ ಅಲ್ಲ ಎಂದು ಕೆಲವರು ಸಾಮಾಜಿಕಜಾಲತಾಣಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು.</p>.<p>ಈ ಘಟನೆಯಿಂದ ಮುಜುಗರಕ್ಕೆ ಒಳಗಾಗಿದ್ದ ಮಹಾರಾಷ್ಟ್ರ ಪೊಲೀಸರು ಪ್ರಮೋದ್ ವಾಲ್ಕೆಯನ್ನು ಸೇವೆಯಿಂದ ಅಮಾನತು ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>