ನಾಗಪುರದ ಭೀವಾಪುರ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದಹೆಡ್ ಕಾನ್ಸ್ಟೆಬಲ್ ಪ್ರಮೋದ್ ವಾಲ್ಕೆ ಸೇವೆಯಿಂದ ಅಮಾನತುಗೊಂಡಿದ್ದಾರೆ.ಇಲ್ಲಿನ ಸ್ಥಳೀಯ ಸರ್ಕಾರಿ ಶಾಲೆಯಲ್ಲಿ ಜನವರಿ 26ರಂದು ಗಣರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿತ್ತು. ವೇದಿಕೆಯಲ್ಲಿ ಮಕ್ಕಳುದೇಶಭಕ್ತಿ ಗೀತೆಗೆ ಹೆಜ್ಜೆ ಹಾಕುತ್ತಿದ್ದರು. ಈ ವೇಳೆ ವೇದಿಕೆಗೆ ಬಂದ ಪ್ರಮೋದ್ ವಾಲ್ಕೆ ಮಕ್ಕಳ ಮೇಲೆ ಹಣವನ್ನು ತೂರಿ ಸಂಭ್ರಮಿಸಿದ್ದರು. ಈ ದೃಶ್ಯವನ್ನು ಮೊಬೈಲ್ನಲ್ಲಿ ಚಿತ್ರಿಕರಿಸಿದ್ದ ಕೆಲವರು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದರು.