ಜಗತ್ತಿನ ಸುಮಾರು 60 ದೇಶಗಳು ಕೊರೊನಾ ಭೀತಿಯಲ್ಲಿ ತಲ್ಲಣಿಸುತ್ತಿರುವ ಸಂದರ್ಭ ಅಸ್ಸಾಂ ವಿಧಾನಸಭೆ ಕಲಾಪದಲ್ಲಿ ಮಾತನಾಡಿರುವ ಬಿಜೆಪಿ ಶಾಸಕಿ ಸುಮನ್ ಹರಿಪ್ರಿಯಾ, ‘ಕ್ಯಾನ್ಸರ್ನಂತಹ ಮಾರಕ ಕಾಯಿಲೆಗಳನ್ನು ಗುಣಪಡಿಸುವ ನಿಟ್ಟಿನಲ್ಲಿ ಹಸು ಮೂತ್ರ ಮತ್ತು ಹಸುವಿನ ಸಗಣಿ ಸಹಾಯ ಮಾಡುತ್ತವೆ. ಹಸುವಿನ ಸಗಣಿ ಆರೋಗ್ಯಕ್ಕೆ ತುಂಬಾ ಸಹಕಾರಿಯಾಗಿದೆ. ಹಸುವಿನ ಮೂತ್ರ ಸಿಂಪಡಿಸುವ ಮೂಲಕ ಜಾಗವನ್ನು ಶುದ್ಧೀಕರಿಸಲಾಗುತ್ತದೆ. ಕೊರೊನಾ ಸೋಂಕು ಗುಣಪಡಿಸಲು ಗೋಮೂತ್ರ ಮತ್ತು ಸಗಣಿಯನ್ನು ಬಳಸಬಹುದು’ ಎಂದು ಅವರು ತಿಳಿಸಿದ್ದಾರೆ.