ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ಲಾಕ್‌ಡೌನ್‌ ಉಲ್ಲಂಘಿಸುವವರ ಕಾಲಿಗೆ ಗುಂಡಿಕ್ಕಿ ಎಂದ ಬಿಜೆಪಿ ಶಾಸಕ

Last Updated 27 ಮಾರ್ಚ್ 2020, 1:51 IST
ಅಕ್ಷರ ಗಾತ್ರ

ಲಖನೌ: ಕೊರೊನಾ ವೈರಸ್ ಹರಡದಂತೆ ತಡೆಯಲು ಘೋಷಿಸಲಾಗಿರುವ ಲಾಕ್‌ಡೌನ್ ಆದೇಶ ಉಲ್ಲಂಘಿಸಿ ತಿರುಗಾಡುವವರ ಕಾಲಿಗೆ ಗುಂಡು ಹೊಡೆಯಿರಿ ಎಂದು ಉತ್ತರ ಪ್ರದೇಶದ ಗಾಜಿಯಾಬಾದ್‌ನ ಬಿಜೆಪಿ ಶಾಸಕ ನಂದಕಿಶೋರ್ ಗುರ್ಜರ್ ಪೊಲೀಸರಿಗೆ ಹೇಳಿದ್ದಾರೆ. ಗುಂಡು ಹೊಡೆಯುವ ಪೊಲೀಸರಿಗೆ ಬಹುಮಾನ ನೀಡುವುದಾಗಿಯೂ ಘೋಷಿಸಿದ್ದಾರೆ.

ಆದೇಶ ಉಲ್ಲಂಘಿಸುವವರನ್ನು ‘ದೇಶದ್ರೋಹಿಗಳು’ ಎಂದು ಕರೆದಿರುವ ಅವರು, ಅಂತಹವರ ಕಾಲಿಗೆ ಗುಂಡಿಕ್ಕುವ ಪೊಲೀಸರಿಗೆ ₹ 5,100 ಬಹುಮಾನ ನೀಡುವೆ ಎಂದು ಹೇಳಿದ್ದಾರೆ.

‘ಮುಸ್ಲಿಮರು ಮಸೀದಿಗಳಲ್ಲಿ ಸಾಮೂಹಿಕವಾಗಿ ಸೇರುತ್ತಿರು ಬಗ್ಗೆ ತಿಳಿದುಬಂದಿದೆ. ಅಂತಹವರ ಜತೆ ಪೊಲೀಸರು ಶಿಸ್ತಿನಿಂದ ವರ್ತಿಸಬೇಕಿದೆ. ಅಗತ್ಯಬಿದ್ದಲ್ಲಿ ಕಾಲಿಗೆ ಗುಂಡಿಕ್ಕುವ ಬಗ್ಗೆಯೂ ಗಮನಿಸಬೇಕಿದೆ’ ಎಂದು ಗುರ್ಜರ್ ಹೇಳಿದ್ದಾರೆ.

ಕೊರೊನಾ ವೈರಸ್ ಗೋಶಾಲೆಗಳನ್ನು ಪ್ರವೇಶಿಸುವುದಿಲ್ಲ ಎಂದು ಗುರ್ಜರ್ ಈ ಹಿಂದೆ ನೀಡಿದ್ದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗೆ ಗುರಿಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT