<p><strong>ನವದೆಹಲಿ:</strong>ರಾಷ್ಟ್ರ ರಾಜಧಾನಿಯಿಂದ 200 ಕಿ.ಮೀ ನಡೆದು ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಹಳ್ಳಿಯಲ್ಲಿರುವ ತಮ್ಮ ಮನೆಗೆ ತಲುಪಬೇಕಿದ್ದ ಯುವಕ ಮಾರ್ಗ ಮಧ್ಯದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.</p>.<p>ಲಾಕ್ಡೌನ್ ಹಿನ್ನೆಲೆಯಲ್ಲಿ ಯಾವುದೇ ವಾಹನ ಸಿಗದೇ ಕಾಲ್ನಡಿಗೆಯ ಮೂಲಕ ಮನೆ ತಲುಪಲು ಈ ಯುವಕ ತಮ್ಮ ಪ್ರಯಾಣ ಆರಂಭಿಸಿದ್ದು, ದೆಹಲಿ-ಆಗ್ರಾ ಹೆದ್ದಾರಿಯಲ್ಲಿ ಸಾವನ್ನಪ್ಪಿದ್ದಾರೆ.</p>.<p>ಮೃತಪಟ್ಟಿರುವ 38 ವರ್ಷದ ರಣವೀರ್ ಸಿಂಗ್ ಅವರು ದೆಹಲಿಯಲ್ಲಿರುವ ಆಹಾರ ಸರಬರಾಜು ಮಾಡುತ್ತಿದ್ದ ಸಂಸ್ಥೆಯೊಂದರಲ್ಲಿ ಕೆಲಸಕ್ಕಿದ್ದರು ಎಂದು ತಿಳಿದುಬಂದಿದೆ.</p>.<p>ರಣವೀರ್ ಸಿಂಗ್ ಅವರ ಕುಟುಂಬ ವಾಸವಿದ್ದ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಹಳ್ಳಿಯು ಅವರು ಸಾವನ್ನಪ್ಪಿರುವ ಸ್ಥಳದಿಂದ ಇನ್ನೂ 100 ಕಿ.ಮೀ ದೂರದಲ್ಲಿತ್ತು ಎಂದು ತಿಳಿದುಬಂದಿದೆ.</p>.<p>ರಣವೀರ್ ಸಿಂಗ್ ದೇಹವನ್ನು ಶವಪರೀಕ್ಷೆಗೆ ಕಳುಹಿಸಲಾಗಿದ್ದು, ಪೂರ್ಣಗೊಂಡ ನಂತರ ಪಾರ್ಥಿವ ಶರೀರವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.</p>.<p>ರಣವೀರ್ ಸಿಂಗ್ ಜೊತೆಯಲ್ಲಿದ್ದ ಇಬ್ಬರು, 'ಸಾವನ್ನಪ್ಪುವ ಸ್ವಲ್ಪ ಸಮಯಕ್ಕೂ ಮೊದಲು ರಣವೀರ್ ಸಿಂಗ್ಗೆ ಎದೆ ನೋವು ಕಾಣಿಸಿಕೊಂಡಿತ್ತು' ಎಂದು ಪೊಲೀಸರಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ರಾಷ್ಟ್ರ ರಾಜಧಾನಿಯಿಂದ 200 ಕಿ.ಮೀ ನಡೆದು ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಹಳ್ಳಿಯಲ್ಲಿರುವ ತಮ್ಮ ಮನೆಗೆ ತಲುಪಬೇಕಿದ್ದ ಯುವಕ ಮಾರ್ಗ ಮಧ್ಯದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.</p>.<p>ಲಾಕ್ಡೌನ್ ಹಿನ್ನೆಲೆಯಲ್ಲಿ ಯಾವುದೇ ವಾಹನ ಸಿಗದೇ ಕಾಲ್ನಡಿಗೆಯ ಮೂಲಕ ಮನೆ ತಲುಪಲು ಈ ಯುವಕ ತಮ್ಮ ಪ್ರಯಾಣ ಆರಂಭಿಸಿದ್ದು, ದೆಹಲಿ-ಆಗ್ರಾ ಹೆದ್ದಾರಿಯಲ್ಲಿ ಸಾವನ್ನಪ್ಪಿದ್ದಾರೆ.</p>.<p>ಮೃತಪಟ್ಟಿರುವ 38 ವರ್ಷದ ರಣವೀರ್ ಸಿಂಗ್ ಅವರು ದೆಹಲಿಯಲ್ಲಿರುವ ಆಹಾರ ಸರಬರಾಜು ಮಾಡುತ್ತಿದ್ದ ಸಂಸ್ಥೆಯೊಂದರಲ್ಲಿ ಕೆಲಸಕ್ಕಿದ್ದರು ಎಂದು ತಿಳಿದುಬಂದಿದೆ.</p>.<p>ರಣವೀರ್ ಸಿಂಗ್ ಅವರ ಕುಟುಂಬ ವಾಸವಿದ್ದ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಹಳ್ಳಿಯು ಅವರು ಸಾವನ್ನಪ್ಪಿರುವ ಸ್ಥಳದಿಂದ ಇನ್ನೂ 100 ಕಿ.ಮೀ ದೂರದಲ್ಲಿತ್ತು ಎಂದು ತಿಳಿದುಬಂದಿದೆ.</p>.<p>ರಣವೀರ್ ಸಿಂಗ್ ದೇಹವನ್ನು ಶವಪರೀಕ್ಷೆಗೆ ಕಳುಹಿಸಲಾಗಿದ್ದು, ಪೂರ್ಣಗೊಂಡ ನಂತರ ಪಾರ್ಥಿವ ಶರೀರವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.</p>.<p>ರಣವೀರ್ ಸಿಂಗ್ ಜೊತೆಯಲ್ಲಿದ್ದ ಇಬ್ಬರು, 'ಸಾವನ್ನಪ್ಪುವ ಸ್ವಲ್ಪ ಸಮಯಕ್ಕೂ ಮೊದಲು ರಣವೀರ್ ಸಿಂಗ್ಗೆ ಎದೆ ನೋವು ಕಾಣಿಸಿಕೊಂಡಿತ್ತು' ಎಂದು ಪೊಲೀಸರಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>