<p><strong>ನವದೆಹಲಿ</strong>: ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ವೈರಸ್ ಸೋಂಕಿನ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಘೋಷಿಸಿರುವ 'ಪಿಎಂ ಕೇರ್ಸ್' ನಿಧಿಗೆ ವಿದೇಶದಿಂದ ಬರುವ ದೇಣಿಗೆಯನ್ನು ಸ್ವೀಕರಿಸಲು ಕೇಂದ್ರಸರ್ಕಾರ ನಿರ್ಧರಿಸಿದೆ.</p>.<p>ಆ ಮೂಲಕ ಕೊರೊನಾ ಸೋಂಕು ಸೃಷ್ಟಿಸಿರುವ ಬಿಕ್ಕಟ್ಟನ್ನು ಎದುರಿಸಲು ವಿದೇಶಿ ದೇಣಿಗೆ ಸ್ವೀಕರಿಸುವುದಿಲ್ಲ ಎಂಬ ನಿರ್ಧಾರದಿಂದ ಮೋದಿ ನೇತೃತ್ವದ ಸರ್ಕಾರ ಹಿಂದೆ ಸರಿದಿದೆ.</p>.<p>ಯಾವುದೇ ರಾಷ್ಟ್ರೀಯತೆ ಹೊಂದಿರುವ ವ್ಯಕ್ತಿ ಅಥವಾ ಸಂಸ್ಥೆಯು 'ಪಿಎಂ ಕೇರ್ಸ್' ನಿಧಿಗೆ ದೇಣಿಗೆ ನೀಡಬಹುದಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.</p>.<p>ಸಾಂಕ್ರಾಮಿಕ ಪಿಡುಗು ಎದುರಿಸಲು ಪ್ರಧಾನಮಂತ್ರಿ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿಗಳ ನಿಧಿಗೆ (ಪಿಎಂ ಕೇರ್ಸ್) ವಿದೇಶದಿಂದ ಬರುವ ದೇಣಿಗೆಯನ್ನು ಸ್ವೀಕರಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.</p>.<p>ಪ್ರಧಾನಿ ಮೋದಿ ಅವರು 'ಪಿಎಂ ಕೇರ್ಸ್' ನಿಧಿಯನ್ನು ಸ್ಥಾಪಿಸಿರುವುದಾಗಿ ಶನಿವಾರ ಘೋಷಿಸಿದರು. ಪ್ರಧಾನಿ ಮೋದಿ ಈ ಟ್ರಸ್ಟ್ನ ಅಧ್ಯಕ್ಷರಾಗಿದ್ದು, ಅದರ ಸದಸ್ಯರ ಪಟ್ಟಿಯಲ್ಲಿ ರಕ್ಷಣಾ ಸಚಿವರು, ಗೃಹ ಸಚಿವರು ಮತ್ತು ಹಣಕಾಸು ಸಚಿವರು ಸೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ವೈರಸ್ ಸೋಂಕಿನ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಘೋಷಿಸಿರುವ 'ಪಿಎಂ ಕೇರ್ಸ್' ನಿಧಿಗೆ ವಿದೇಶದಿಂದ ಬರುವ ದೇಣಿಗೆಯನ್ನು ಸ್ವೀಕರಿಸಲು ಕೇಂದ್ರಸರ್ಕಾರ ನಿರ್ಧರಿಸಿದೆ.</p>.<p>ಆ ಮೂಲಕ ಕೊರೊನಾ ಸೋಂಕು ಸೃಷ್ಟಿಸಿರುವ ಬಿಕ್ಕಟ್ಟನ್ನು ಎದುರಿಸಲು ವಿದೇಶಿ ದೇಣಿಗೆ ಸ್ವೀಕರಿಸುವುದಿಲ್ಲ ಎಂಬ ನಿರ್ಧಾರದಿಂದ ಮೋದಿ ನೇತೃತ್ವದ ಸರ್ಕಾರ ಹಿಂದೆ ಸರಿದಿದೆ.</p>.<p>ಯಾವುದೇ ರಾಷ್ಟ್ರೀಯತೆ ಹೊಂದಿರುವ ವ್ಯಕ್ತಿ ಅಥವಾ ಸಂಸ್ಥೆಯು 'ಪಿಎಂ ಕೇರ್ಸ್' ನಿಧಿಗೆ ದೇಣಿಗೆ ನೀಡಬಹುದಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.</p>.<p>ಸಾಂಕ್ರಾಮಿಕ ಪಿಡುಗು ಎದುರಿಸಲು ಪ್ರಧಾನಮಂತ್ರಿ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿಗಳ ನಿಧಿಗೆ (ಪಿಎಂ ಕೇರ್ಸ್) ವಿದೇಶದಿಂದ ಬರುವ ದೇಣಿಗೆಯನ್ನು ಸ್ವೀಕರಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.</p>.<p>ಪ್ರಧಾನಿ ಮೋದಿ ಅವರು 'ಪಿಎಂ ಕೇರ್ಸ್' ನಿಧಿಯನ್ನು ಸ್ಥಾಪಿಸಿರುವುದಾಗಿ ಶನಿವಾರ ಘೋಷಿಸಿದರು. ಪ್ರಧಾನಿ ಮೋದಿ ಈ ಟ್ರಸ್ಟ್ನ ಅಧ್ಯಕ್ಷರಾಗಿದ್ದು, ಅದರ ಸದಸ್ಯರ ಪಟ್ಟಿಯಲ್ಲಿ ರಕ್ಷಣಾ ಸಚಿವರು, ಗೃಹ ಸಚಿವರು ಮತ್ತು ಹಣಕಾಸು ಸಚಿವರು ಸೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>