<p><strong>ವಾಸಿಂಗ್ಟನ್</strong>: ಕೊರೊನಾ ವೈರಸ್ ಸೋಂಕಿನ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಭಾರತಕ್ಕೆ 1 ಬಿಲಿಯನ್ ಡಾಲರ್(7,600 ಕೋಟಿ ರೂ.)ತುರ್ತು ಧನ ಸಹಾಯ ನೀಡಲು ವಿಶ್ವ ಬ್ಯಾಂಕ್ ಗುರುವಾರ ಅನುಮೋದನೆ ನೀಡಿದೆ.</p>.<p>ಇಲ್ಲಿಯವರೆಗೆ ಭಾರತದಲ್ಲಿ ಕೊರೊನಾ ವೈರಸ್ ಸೋಂಕಿಗೆ 53 ಜನರು ಬಲಿಯಾಗಿದ್ದು, 2,000 ಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿಸಿದೆ.</p>.<p>ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ವಿಶ್ವ ಬ್ಯಾಂಕ್ ತನ್ನ ಮೊದಲ ಯೋಜನೆಯಲ್ಲಿ 25 ದೇಶಗಳಿಗೆ ಸಹಾಯ ಮಾಡಲಿವೆ.</p>.<p>ಮುಂದಿನ ದಿನಗಳಲ್ಲಿ 40 ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕೊರೊನಾ ಸೋಂಕಿನ ವಿರುದ್ಧ ತ್ವರಿತ ಕಾರ್ಯಾಚರಣೆ ಮಾಡಲು ಸಹಾಯಹಸ್ತ ಚಾಚುವುದಾಗಿ ವಿಶ್ವ ಬ್ಯಾಂಕ್ ಹೇಳಿದೆ.</p>.<p>ವಿಶ್ವ ಬ್ಯಾಂಕ್ನ ತುರ್ತು ಹಣಕಾಸು ನೆರವಿನ ದೊಡ್ಡ ಭಾಗ ಭಾರತಕ್ಕೆ ದೊರೆಯಲಿದೆ.</p>.<p>ನೀತಿ ಆಧಾರಿತ ಹಣಕಾಸು ಸಹಾಯಕ್ಕೆ ಒತ್ತು ನೀಡಲಾಗುವುದು. ಆ ಮೂಲಕ ವಿವಿಧ ದೇಶಗಳಲ್ಲಿ ವಾಸಿಸುವ ಬಡ ಕುಟುಂಬಗಳು ಮತ್ತು ಪರಿಸರ ರಕ್ಷಿಸುವ ಕೆಲಸಕ್ಕೆ ಒತ್ತು ನೀಡಲಾಗುತ್ತಿದೆ ಎಂದು ವಿಶ್ವ ಬ್ಯಾಂಕ್ ತಿಳಿಸಿದೆ.</p>.<p>'ವಿಶ್ವ ಬ್ಯಾಂಕ್ ಸಮೂಹವು ಕೋವಿಡ್-19 ಹರಡುವುದನ್ನು ಕಡಿಮೆ ಮಾಡಲು ತ್ವರಿತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ನಾವು ಈಗಾಗಲೇ 65ಕ್ಕೂ ಹೆಚ್ಚು ದೇಶಗಳಲ್ಲಿ ಜನರ ಆರೋಗ್ಯಕ್ಕೆ ಸಂಬಂಧಿಸಿದ ತ್ವರಿತಕಾರ್ಯಾಚರಣೆಯನ್ನು ಮಾಡುತ್ತಿದ್ದೇವೆ' ಎಂದು ವಿಶ್ವ ಬ್ಯಾಂಕ್ ಸಮೂಹದ ಅಧ್ಯಕ್ಷ ಡೇವಿಡ್ ಮಾಲ್ಪಾಸ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಸಿಂಗ್ಟನ್</strong>: ಕೊರೊನಾ ವೈರಸ್ ಸೋಂಕಿನ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಭಾರತಕ್ಕೆ 1 ಬಿಲಿಯನ್ ಡಾಲರ್(7,600 ಕೋಟಿ ರೂ.)ತುರ್ತು ಧನ ಸಹಾಯ ನೀಡಲು ವಿಶ್ವ ಬ್ಯಾಂಕ್ ಗುರುವಾರ ಅನುಮೋದನೆ ನೀಡಿದೆ.</p>.<p>ಇಲ್ಲಿಯವರೆಗೆ ಭಾರತದಲ್ಲಿ ಕೊರೊನಾ ವೈರಸ್ ಸೋಂಕಿಗೆ 53 ಜನರು ಬಲಿಯಾಗಿದ್ದು, 2,000 ಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿಸಿದೆ.</p>.<p>ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ವಿಶ್ವ ಬ್ಯಾಂಕ್ ತನ್ನ ಮೊದಲ ಯೋಜನೆಯಲ್ಲಿ 25 ದೇಶಗಳಿಗೆ ಸಹಾಯ ಮಾಡಲಿವೆ.</p>.<p>ಮುಂದಿನ ದಿನಗಳಲ್ಲಿ 40 ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕೊರೊನಾ ಸೋಂಕಿನ ವಿರುದ್ಧ ತ್ವರಿತ ಕಾರ್ಯಾಚರಣೆ ಮಾಡಲು ಸಹಾಯಹಸ್ತ ಚಾಚುವುದಾಗಿ ವಿಶ್ವ ಬ್ಯಾಂಕ್ ಹೇಳಿದೆ.</p>.<p>ವಿಶ್ವ ಬ್ಯಾಂಕ್ನ ತುರ್ತು ಹಣಕಾಸು ನೆರವಿನ ದೊಡ್ಡ ಭಾಗ ಭಾರತಕ್ಕೆ ದೊರೆಯಲಿದೆ.</p>.<p>ನೀತಿ ಆಧಾರಿತ ಹಣಕಾಸು ಸಹಾಯಕ್ಕೆ ಒತ್ತು ನೀಡಲಾಗುವುದು. ಆ ಮೂಲಕ ವಿವಿಧ ದೇಶಗಳಲ್ಲಿ ವಾಸಿಸುವ ಬಡ ಕುಟುಂಬಗಳು ಮತ್ತು ಪರಿಸರ ರಕ್ಷಿಸುವ ಕೆಲಸಕ್ಕೆ ಒತ್ತು ನೀಡಲಾಗುತ್ತಿದೆ ಎಂದು ವಿಶ್ವ ಬ್ಯಾಂಕ್ ತಿಳಿಸಿದೆ.</p>.<p>'ವಿಶ್ವ ಬ್ಯಾಂಕ್ ಸಮೂಹವು ಕೋವಿಡ್-19 ಹರಡುವುದನ್ನು ಕಡಿಮೆ ಮಾಡಲು ತ್ವರಿತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ನಾವು ಈಗಾಗಲೇ 65ಕ್ಕೂ ಹೆಚ್ಚು ದೇಶಗಳಲ್ಲಿ ಜನರ ಆರೋಗ್ಯಕ್ಕೆ ಸಂಬಂಧಿಸಿದ ತ್ವರಿತಕಾರ್ಯಾಚರಣೆಯನ್ನು ಮಾಡುತ್ತಿದ್ದೇವೆ' ಎಂದು ವಿಶ್ವ ಬ್ಯಾಂಕ್ ಸಮೂಹದ ಅಧ್ಯಕ್ಷ ಡೇವಿಡ್ ಮಾಲ್ಪಾಸ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>