'ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಬೇಕಾದ ತಂತ್ರಜ್ಞಾನ ಅಷ್ಟೇನೂ ಕಷ್ಟದಾಯಕವಲ್ಲ. ಕೊರೊನಾ ಬಿಕ್ಕಟ್ಟು ಉಲ್ಬಣಿಸಿದ ನಂತರ ವೈದ್ಯಕೀಯ ಉಪಕರಣ ಮತ್ತು ಸಾಧನಗಳು ಎಷ್ಟು ಅವಶ್ಯಕ ಎಂದು ಸರ್ಕಾರಕ್ಕೆ ಮನವರಿಕೆಯಾಗಿದೆ. ಈ ನಿಟ್ಟಿನಲ್ಲಿ ದೇಶವು ಸ್ವಾವಲಂಬಿಯಾಗುವಂತಹ ಕಾರ್ಯಸೂಚಿಗಳನ್ನು ಸರ್ಕಾರ ತರಬೇಕು. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂಬ ನಂಬಿಕೆ ನನಗಿದೆ' ಎಂದು ಕಸ್ತೂರಿ ರಂಗನ್ ಹೇಳಿದ್ದಾರೆ.