ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮತ್ತು ಎನ್ಸಿಪಿ ಜೊತೆಗೂಡಿ ಶಿವಸೇನಾ ಸರ್ಕಾರ ರಚಿಸಿದೆ. ರಾಹುಲ್ ಅವರು ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಸೂಕ್ತ ನಿರ್ಧಾರ ತಳೆದಿದ್ದು, ಮೋದಿ ಜೊತೆಗಿನ ಭಿನ್ನಮತದ ನಡುವೆಯೂ ರಾಜಕೀಯ ಪಕ್ವತೆ ಪ್ರದರ್ಶಿಸಿದ್ದಾರೆ ಎಂದಿದೆ. ಈ ಬಗ್ಗೆ ತನ್ನ ಮುಖವಾಣಿ ‘ಸಾಮ್ನಾ’ದಲ್ಲಿ ಸಂಪಾದಕೀಯವನ್ನು ಬರೆದಿದೆ. ಕೊರೊನಾ ಬಿಕ್ಕಟ್ಟು ಕುರಿತು ರಾಹುಲ್ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ಮುಖಾಮುಖಿ ಚರ್ಚಿಸಬೇಕು ಎಂದೂ ಸಲಹೆ ಮಾಡಿದೆ.