<p><strong>ನವದೆಹಲಿ:</strong>ದೇಶದಾದ್ಯಂತ ಲಾಕ್ಡೌನ್ ಘೋಷಿಸಿದ ನಂತರ ತೀವ್ರ ತೊಂದರೆಗೆ ಒಳಗಾಗಿರುವ ವಲಸೆ ಕಾರ್ಮಿಕರಿಗೆ ಆಹಾರ ಮತ್ತು ಆಶ್ರಯ ಒದಗಿಸುವ ನಿಟ್ಟಿನಲ್ಲಿ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ.</p>.<p>ಇಂದು ಬೆಳಗ್ಗೆ 11 ಗಂಟೆ ಹೊತ್ತಿಗೆ ರಸ್ತೆ ಮೇಲೆ ಯಾವುದೇ ವಲಸೆ ಕಾರ್ಮಿಕರು ಇರಲಿಲ್ಲ ಎಂದು ಅರ್ಜಿ ವಿಚಾರಣೆ ವೇಳೆ ಕೇಂದ್ರದ ಗೃಹ ಕಾರ್ಯದರ್ಶಿ ಸುಪ್ರೀಂ ಕೋರ್ಟ್ಗೆ ತಿಳಿಸಿದರು.</p>.<p>ಈ ಹೇಳಿಕೆಗೆ ಪ್ರತಿಕ್ರಿಯಿಸಿ ವಾದ ಮುಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, 'ಇಂದು ಬೆಳಿಗ್ಗೆ 11 ಗಂಟೆಯ ಹೊತ್ತಿಗೆ ಯಾರೂ ರಸ್ತೆಯಲ್ಲಿಲ್ಲ ಎಂದು ಗೃಹ ಕಾರ್ಯದರ್ಶಿ ಹೇಳುತ್ತಿದ್ದಾರೆ. ಆದರೆ, ವಲಸೆ ಕಾರ್ಮಿಕರನ್ನು ಸಮೀಪದ ಆಶ್ರಯ ತಾಣಕ್ಕೆ ಬಲವಂತವಾಗಿ ಕರೆದೊಯ್ಯಲಾಗಿದೆ' ಎಂದು ಹೇಳಿದರು.</p>.<p>ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಎಲ್ಲಾ ಸಾರ್ವಜನಿಕ ಸಾರಿಗೆಯನ್ನು ಸ್ಥಗಿತಗೊಳಿಸಲಾಯಿತು. ನಂತರ ಮಹಾನಗರಗಳಲ್ಲಿರುವ ವಲಸೆ ಕಾರ್ಮಿಕರು ತಮ್ಮ ಊರಿಗಳಿಗೆ ಕಾಲ್ನಡಿಗೆಯಲ್ಲಿಯೇ ತೆರಳಲು ಆರಂಭಿಸಿದರು. ದೀರ್ಘ ಪ್ರಯಾಣದಲ್ಲಿ ಹಲವು ಹೃದಯ ವಿದ್ರಾವಕ ಘಟನೆಗಳು ನಡೆದವು.</p>.<p>ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಅವರು 24 ಗಂಟೆಗಳ ಒಳಗೆ ತಜ್ಞರ ಸಮಿತಿಯನ್ನು ರಚಿಸುವಂತೆ ಸರ್ಕಾರಕ್ಕೆ ಆದೇಶ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ದೇಶದಾದ್ಯಂತ ಲಾಕ್ಡೌನ್ ಘೋಷಿಸಿದ ನಂತರ ತೀವ್ರ ತೊಂದರೆಗೆ ಒಳಗಾಗಿರುವ ವಲಸೆ ಕಾರ್ಮಿಕರಿಗೆ ಆಹಾರ ಮತ್ತು ಆಶ್ರಯ ಒದಗಿಸುವ ನಿಟ್ಟಿನಲ್ಲಿ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ.</p>.<p>ಇಂದು ಬೆಳಗ್ಗೆ 11 ಗಂಟೆ ಹೊತ್ತಿಗೆ ರಸ್ತೆ ಮೇಲೆ ಯಾವುದೇ ವಲಸೆ ಕಾರ್ಮಿಕರು ಇರಲಿಲ್ಲ ಎಂದು ಅರ್ಜಿ ವಿಚಾರಣೆ ವೇಳೆ ಕೇಂದ್ರದ ಗೃಹ ಕಾರ್ಯದರ್ಶಿ ಸುಪ್ರೀಂ ಕೋರ್ಟ್ಗೆ ತಿಳಿಸಿದರು.</p>.<p>ಈ ಹೇಳಿಕೆಗೆ ಪ್ರತಿಕ್ರಿಯಿಸಿ ವಾದ ಮುಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, 'ಇಂದು ಬೆಳಿಗ್ಗೆ 11 ಗಂಟೆಯ ಹೊತ್ತಿಗೆ ಯಾರೂ ರಸ್ತೆಯಲ್ಲಿಲ್ಲ ಎಂದು ಗೃಹ ಕಾರ್ಯದರ್ಶಿ ಹೇಳುತ್ತಿದ್ದಾರೆ. ಆದರೆ, ವಲಸೆ ಕಾರ್ಮಿಕರನ್ನು ಸಮೀಪದ ಆಶ್ರಯ ತಾಣಕ್ಕೆ ಬಲವಂತವಾಗಿ ಕರೆದೊಯ್ಯಲಾಗಿದೆ' ಎಂದು ಹೇಳಿದರು.</p>.<p>ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಎಲ್ಲಾ ಸಾರ್ವಜನಿಕ ಸಾರಿಗೆಯನ್ನು ಸ್ಥಗಿತಗೊಳಿಸಲಾಯಿತು. ನಂತರ ಮಹಾನಗರಗಳಲ್ಲಿರುವ ವಲಸೆ ಕಾರ್ಮಿಕರು ತಮ್ಮ ಊರಿಗಳಿಗೆ ಕಾಲ್ನಡಿಗೆಯಲ್ಲಿಯೇ ತೆರಳಲು ಆರಂಭಿಸಿದರು. ದೀರ್ಘ ಪ್ರಯಾಣದಲ್ಲಿ ಹಲವು ಹೃದಯ ವಿದ್ರಾವಕ ಘಟನೆಗಳು ನಡೆದವು.</p>.<p>ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಅವರು 24 ಗಂಟೆಗಳ ಒಳಗೆ ತಜ್ಞರ ಸಮಿತಿಯನ್ನು ರಚಿಸುವಂತೆ ಸರ್ಕಾರಕ್ಕೆ ಆದೇಶ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>