<p><strong>ಬೆಂಗಳೂರು:</strong> ದೇಶದಾದ್ಯಂತ 21 ದಿನಗಳ ಲಾಕ್ಡೌನ್ ಮುಗಿದು, ಇನ್ನೂ 19 ದಿನಗಳ ವರೆಗೂ ದಿಗ್ಬಂಧನ ವಿಸ್ತರಿಸಲಾಗಿದೆ. ಈ ನಡುವೆ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಏರಿಕೆಯಾಗುತ್ತಲೇ ಇದ್ದು, ಬುಧವಾರ ದೇಶದಲ್ಲಿ ಒಟ್ಟು ಸೋಂಕು ಪ್ರಕರಣಗಳು 11,439 ತಲುಪಿದೆ.</p>.<p>ಕಳೆದ 24 ಗಂಟೆಗಳಲ್ಲಿ ಒಟ್ಟು 1,076 ಹೊಸ ಪ್ರಕರಣಗಳು ದಾಖಲಾಗಿದ್ದು ಸೋಂಕಿಗೆ 38 ಮಂದಿ ಬಲಿಯಾಗಿದ್ದಾರೆ.</p>.<p>ದೇಶದಲ್ಲಿ ಒಟ್ಟು ಕೋವಿಡ್-19 ಧೃಡಪಟ್ಟ 11,439 ಪ್ರಕರಣಗಳ ಪೈಕಿ 377 ಮಂದಿ ಮೃತಪಟ್ಟಿದ್ದಾರೆ. 1,306 ಜನ ಗುಣಮುಖರಾಗಿದ್ದು, ವಿವಿಧ ರಾಜ್ಯಗಳಲ್ಲಿ 9,756 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಮಹಾರಾಷ್ಟ್ರದಲ್ಲಿ ಒಟ್ಟು 2,687 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಸೋಂಕಿನಿಂದ ಈಗಾಗಲೇ 178 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಅತಿ ಹೆಚ್ಚು ಸಾವು ಮಹಾರಾಷ್ಟ್ರದಲ್ಲಿ ದಾಖಲಾಗಿದೆ.</p>.<p>ಇನ್ನೂ ದೆಹಲಿಯಲ್ಲಿ ಒಟ್ಟು 1,561 ಪ್ರಕರಣಗಳು, 30 ಮಂದಿ ಸಾವು; ತಮಿಳುನಾಡಿನಲ್ಲಿ 1,204 ಪ್ರಕರಣಗಳು, 12 ಮಂದಿ ಸಾವು; ರಾಜಸ್ಥಾನದಲ್ಲಿ 969 ಪ್ರಕರಣಗಳು, 3 ಮಂದಿ ಸಾವಿಗೀಡಾಗಿದ್ದಾರೆ. ಕರ್ನಾಟಕದಲ್ಲಿ 260 ಸೋಂಕು ಪ್ರಕರಣಗಳು ದಾಖಲಾಗಿದ್ದು, 10 ಮಂದಿ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದಲ್ಲಿ 730 ಸೋಂಕು ಪ್ರಕರಣಗಳ ಪೈಕಿ 50 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದೇಶದಾದ್ಯಂತ 21 ದಿನಗಳ ಲಾಕ್ಡೌನ್ ಮುಗಿದು, ಇನ್ನೂ 19 ದಿನಗಳ ವರೆಗೂ ದಿಗ್ಬಂಧನ ವಿಸ್ತರಿಸಲಾಗಿದೆ. ಈ ನಡುವೆ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಏರಿಕೆಯಾಗುತ್ತಲೇ ಇದ್ದು, ಬುಧವಾರ ದೇಶದಲ್ಲಿ ಒಟ್ಟು ಸೋಂಕು ಪ್ರಕರಣಗಳು 11,439 ತಲುಪಿದೆ.</p>.<p>ಕಳೆದ 24 ಗಂಟೆಗಳಲ್ಲಿ ಒಟ್ಟು 1,076 ಹೊಸ ಪ್ರಕರಣಗಳು ದಾಖಲಾಗಿದ್ದು ಸೋಂಕಿಗೆ 38 ಮಂದಿ ಬಲಿಯಾಗಿದ್ದಾರೆ.</p>.<p>ದೇಶದಲ್ಲಿ ಒಟ್ಟು ಕೋವಿಡ್-19 ಧೃಡಪಟ್ಟ 11,439 ಪ್ರಕರಣಗಳ ಪೈಕಿ 377 ಮಂದಿ ಮೃತಪಟ್ಟಿದ್ದಾರೆ. 1,306 ಜನ ಗುಣಮುಖರಾಗಿದ್ದು, ವಿವಿಧ ರಾಜ್ಯಗಳಲ್ಲಿ 9,756 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಮಹಾರಾಷ್ಟ್ರದಲ್ಲಿ ಒಟ್ಟು 2,687 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಸೋಂಕಿನಿಂದ ಈಗಾಗಲೇ 178 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಅತಿ ಹೆಚ್ಚು ಸಾವು ಮಹಾರಾಷ್ಟ್ರದಲ್ಲಿ ದಾಖಲಾಗಿದೆ.</p>.<p>ಇನ್ನೂ ದೆಹಲಿಯಲ್ಲಿ ಒಟ್ಟು 1,561 ಪ್ರಕರಣಗಳು, 30 ಮಂದಿ ಸಾವು; ತಮಿಳುನಾಡಿನಲ್ಲಿ 1,204 ಪ್ರಕರಣಗಳು, 12 ಮಂದಿ ಸಾವು; ರಾಜಸ್ಥಾನದಲ್ಲಿ 969 ಪ್ರಕರಣಗಳು, 3 ಮಂದಿ ಸಾವಿಗೀಡಾಗಿದ್ದಾರೆ. ಕರ್ನಾಟಕದಲ್ಲಿ 260 ಸೋಂಕು ಪ್ರಕರಣಗಳು ದಾಖಲಾಗಿದ್ದು, 10 ಮಂದಿ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದಲ್ಲಿ 730 ಸೋಂಕು ಪ್ರಕರಣಗಳ ಪೈಕಿ 50 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>