ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವರಿಗೂ ಕೊರೊನಾ ಭೀತಿ! ಮಾಸ್ಕ್‌ ಧರಿಸಿದ ದೇವತೆಗಳು

Last Updated 14 ಮಾರ್ಚ್ 2020, 20:43 IST
ಅಕ್ಷರ ಗಾತ್ರ

ಲಖನೌ: ಉತ್ತರ ಪ್ರದೇಶದ ದೇವಾಲಯಗಳಲ್ಲೂ ಕೊರೊನಾ ವೈರಸ್‌ ಆತಂಕ ಮೂಡಿಸಿದೆ.

ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿರುವ ಪೂಜಾರಿಗಳು ದೇವತೆಗಳಿಗೆ ಮಾಸ್ಕ್‌ಗಳನ್ನು ಧರಿಸಿದ್ದಾರೆ. ಜತೆಗೆ, ದೇವಾಲಯದಲ್ಲಿನ ವಿಗ್ರಹಗಳನ್ನು ಮುಟ್ಟುವ ಮುನ್ನ ಸ್ಯಾನಿಟೈಸರ್‌ ಉಪಯೋಗಿಸುವಂತೆ ಭಕ್ತಾದಿಗಳಿಗೆ ಸೂಚಿಸುತ್ತಿದ್ದಾರೆ.

ಲಖಿಮಪುರ–ಖೇರಿ ಜಿಲ್ಲೆಯ ಪ್ರಸಿದ್ಧ ಸಂಕಟ ದೇವಿ ದೇವಾಲಯದಲ್ಲಿನ ದೇವರ ವಿಗ್ರಗಳ ಕುತ್ತಿಗೆ ಫಲಕವನ್ನು ಸಹ ಹಾಕಲಾಗಿದೆ. ವೈರಸ್‌ ಹಬ್ಬುವುದನ್ನು ತಡೆಯಲು ಏನು ಮಾಡಬೇಕು ಮತ್ತು ಏನು ಮಾಡಬಾರದು ಎನ್ನುವ ವಿವರ ಇದರಲ್ಲಿದೆ.

‘ದೇವಾಲಯಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಭೇಟಿ ನೀಡುವುದರಿಂದ ಜಾಗೃತಿ ಮೂಡಿಸುವುದು ಅನಿವಾರ್ಯವಾಗಿದೆ’ ಎಂದು ಪೂಜಾರಿಯೊಬ್ಬರು ತಿಳಿಸಿದ್ದಾರೆ.

ಗೋಮೂತ್ರಕ್ಕೆ ಮೊರೆ!
ನವದೆಹಲಿ(ಪಿಟಿಐ): ‘ಗೋಮೂತ್ರ ಸೇವಿಸಿ ಕೊರೊನಾ ವೈರಸ್‌ನಿಂದ ರಕ್ಷಣೆ ಪಡೆಯಿರಿ’ ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಶನಿವಾರ ಇಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು.

‘ಗೋಮೂತ್ರ ಪಾರ್ಟಿ’ ಹೆಸರಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾಲಿನಲ್ಲಿ ನಿಂತು ಜನರು ಗೋಮೂತ್ರ ಪಡೆದರು.

ಮಹಾಸಭಾದ ಅಧ್ಯಕ್ಷ ಎಂದು ಘೋಷಿಸಿಕೊಂಡಿರುವ ಸ್ವಾಮಿ ಚಕ್ರಪಾಣಿ ಮಾತನಾಡಿ, ’ಮಾಂಸಾಹಾರ ಸೇವಿಸುವವರಿಗೆ ಶಿಕ್ಷೆ ವಿಧಿಸಲು ಕೊರೊನಾ ವೈರಸ್‌ ಅವತಾರದ ರೂಪದಲ್ಲಿ ಬಂದಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT