ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ ಮತ್ತು ಪುಣೆಯಲ್ಲಿ ಲಾಕ್‍ಡೌನ್ ತೆರವು ಮಾಡಲು ಸಾಧ್ಯವಿಲ್ಲ: ಉದ್ಧವ್ ಠಾಕ್ರೆ

Last Updated 1 ಮೇ 2020, 11:36 IST
ಅಕ್ಷರ ಗಾತ್ರ

ಮುಂಬೈ:ಮುಂಬೈ ಮತ್ತು ಪುಣೆಯಲ್ಲಿರುವಕೋವಿಡ್-19 ಕೆಂಪು ವಲಯಗಳಲ್ಲಿ ಲಾಕ್‍ಡೌನ್ ತೆರವು ಮಾಡುವುದಿಲ್ಲ ಎಂದು ಮಹಾರಾಷ್ಟ್ರಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಮಹಾರಾಷ್ಟ್ರ ಸಂಸ್ಥಾಪನಾ ದಿನದ ಅಂಗವಾಗಿಶುಕ್ರವಾರ ವೆಬ್‌ಕಾಸ್ಟ್ ಪ್ರಸಾರ ಮಾಡಿದ್ದಾರೆ ಉದ್ಥವ್.ಈ ವೇಳೆ ಮೇ3ರ ನಂತರ ಏನು?ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಕೆಂಪು ವಲಯಗಳೆಂದು ಗುರುತಿಸಿರುವ ಮುಂಬೈ- ಪುಣೆ ಗಡಿಪ್ರದೇಶದಲ್ಲಿ, ನಾಗ್ಪುರ್‌ನ ಕೆಲವು ಪ್ರದೇಶ ಮತ್ತು ಇನ್ನು ಕೆಲವು ಪ್ರದೇಶಗಳಲ್ಲಿ ಲಾಕ್‍ಡೌನ್ ತೆರವು ಮಾಡುವುದಿಲ್ಲ.

ಹಸಿರು ಮತ್ತು ಕಿತ್ತಳೆ ಬಣ್ಣದ ವಲಯದಲ್ಲಿ ಮುಂಜಾಗ್ರತಾ ಕ್ರಮಗಳನ್ನು ವಹಿಸಿ ನಿಧಾನವಾಗಿ ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಬಹುದು. ಆದರೆ ಮುಂಬೈ- ಪುಣೆಯಲ್ಲಿ ಸಾಧ್ಯವಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT