<p><strong>ನವದೆಹಲಿ:</strong> ಸಂಸದರ ಪಿಂಚಣಿ ಮತ್ತು ಭತ್ಯೆಯನ್ನು ಶೇ 30 ರಷ್ಟು ಕಡಿತಗೊಳಿಸಲು ನಿರ್ಧರಿಸಲಾಗಿದ್ದು, ವೇತನ ಕಡಿತಗೊಳಿಸುವ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸೋಮವಾರ ತಿಳಿಸಿದ್ದಾರೆ.</p>.<p>ಸಂಸತ್ ಸದಸ್ಯರ ತಿದ್ದುಪಡಿ ಕಾಯ್ದೆ–1954 ರ ಅಡಿಯಲ್ಲಿ ಜಾರಿ ಮಾಡಲಾಗಿರುವ ಈ ಸುಗ್ರೀವಾಜ್ಞೆ, ಏಪ್ರಿಲ್ 1, 2020 ರಿಂದಲೇ ಜಾರಿಗೆ ಬರಲಿದೆ. ವೇತನ ಕಡಿತವು ಒಂದು ವರ್ಷದವರೆಗೆ ಅನ್ವಯವಾಗಲಿದೆ.</p>.<p>‘ಸಂಸದರ ವೇತನ ಕಡಿತಕ್ಕೆ ಸಂಬಂಧಿಸಿದಂತೆ ಹೊರಡಿಸಲಾಗಿರುವ ಸುಗ್ರೀವಾಜ್ಞೆಯ ಹೊರತಾಗಿಯೂ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿಮತ್ತು ಹಲವು ರಾಜ್ಯಗಳ ರಾಜ್ಯಪಾಲರು, ಲೆಫ್ಟಿನೆಂಟ್ ಗವರ್ನರ್ಗಳೂ ಸ್ವಯಂಪ್ರೇರಣೆಯಿಂದ ವೇತನ ಕಡಿತಗೊಳಿಸಿಕೊಳ್ಳಲು ನಿರ್ಧಿರಿಸಿದ್ದಾರೆ’ ಎಂದು ಜಾವಡೇಕರ್ ಹೇಳಿದ್ದಾರೆ.</p>.<p>ಈ ಹಣವನ್ನುಕನ್ಸಾಲಿಡೇಟೆಡ್ ಫಂಡ್ಗೆ (ಸಂಚಿತ ನಿಧಿ)ಸೇರಿಸಲಾಗುತ್ತದೆ ಎಂದೂ ಅವರು ತಿಳಿಸಿದ್ದಾರೆ. ಕನ್ಸಾಲಿಡೇಟೆಡ್ ಫಂಡ್ ಆಫ್ ಇಂಡಿಯಾ ಎಂದರೆ, ಸರ್ಕಾರವು ಖರ್ಚು, ಸಾಲ ಮತ್ತು ತೆರಿಗೆ ರೂಪದಲ್ಲಿ ಸಂಗ್ರಹಿಸಿದ ಒಟ್ಟು ಆದಾಯವಾಗಿದೆ.</p>.<p>ಸಂಸದರ ಪ್ರದೇಶ ಅಭಿವೃದ್ಧಿ ಯೋಜನೆಗೆ ನೀಡುವ ನಿಧಿಯನ್ನು 2022ರ ವರೆಗೆ ತಡೆಹಿಡಿಯಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಸಚಿವರು, ‘ಪ್ರತಿಯೊಬ್ಬ ಸಂಸದರ ನಿಧಿಗೆ ನೀಡಬೇಕಿದ್ದ ತಲಾ₹ 10 ಕೋಟಿ ಹಣವನ್ನು ರಾಷ್ಟ್ರ ನಿರ್ಮಾಣ ಕಾರ್ಯಕ್ಕೆ ಬಳಸಿಕೊಳ್ಳಲಾಗುವುದು’ ಎಂದು ಎಂದಿದ್ದಾರೆ.</p>.<p>2020-21 ಮತ್ತು 2021-22ರ ಅವಧಿಯಲ್ಲಿ ಸಂಸದರ ಪ್ರದೇಶಾಭಿವೃದ್ಧಿಗೆ ನೀಡಬೇಕಿದ್ದ ನಿಧಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವುದರಿಂದ ₹ 7,900 ಕೋಟಿ ಕನ್ಸಾಲಿಡೇಟೆಡ್ ಫಂಡ್ಗೆ ಸೇರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಂಸದರ ಪಿಂಚಣಿ ಮತ್ತು ಭತ್ಯೆಯನ್ನು ಶೇ 30 ರಷ್ಟು ಕಡಿತಗೊಳಿಸಲು ನಿರ್ಧರಿಸಲಾಗಿದ್ದು, ವೇತನ ಕಡಿತಗೊಳಿಸುವ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸೋಮವಾರ ತಿಳಿಸಿದ್ದಾರೆ.</p>.<p>ಸಂಸತ್ ಸದಸ್ಯರ ತಿದ್ದುಪಡಿ ಕಾಯ್ದೆ–1954 ರ ಅಡಿಯಲ್ಲಿ ಜಾರಿ ಮಾಡಲಾಗಿರುವ ಈ ಸುಗ್ರೀವಾಜ್ಞೆ, ಏಪ್ರಿಲ್ 1, 2020 ರಿಂದಲೇ ಜಾರಿಗೆ ಬರಲಿದೆ. ವೇತನ ಕಡಿತವು ಒಂದು ವರ್ಷದವರೆಗೆ ಅನ್ವಯವಾಗಲಿದೆ.</p>.<p>‘ಸಂಸದರ ವೇತನ ಕಡಿತಕ್ಕೆ ಸಂಬಂಧಿಸಿದಂತೆ ಹೊರಡಿಸಲಾಗಿರುವ ಸುಗ್ರೀವಾಜ್ಞೆಯ ಹೊರತಾಗಿಯೂ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿಮತ್ತು ಹಲವು ರಾಜ್ಯಗಳ ರಾಜ್ಯಪಾಲರು, ಲೆಫ್ಟಿನೆಂಟ್ ಗವರ್ನರ್ಗಳೂ ಸ್ವಯಂಪ್ರೇರಣೆಯಿಂದ ವೇತನ ಕಡಿತಗೊಳಿಸಿಕೊಳ್ಳಲು ನಿರ್ಧಿರಿಸಿದ್ದಾರೆ’ ಎಂದು ಜಾವಡೇಕರ್ ಹೇಳಿದ್ದಾರೆ.</p>.<p>ಈ ಹಣವನ್ನುಕನ್ಸಾಲಿಡೇಟೆಡ್ ಫಂಡ್ಗೆ (ಸಂಚಿತ ನಿಧಿ)ಸೇರಿಸಲಾಗುತ್ತದೆ ಎಂದೂ ಅವರು ತಿಳಿಸಿದ್ದಾರೆ. ಕನ್ಸಾಲಿಡೇಟೆಡ್ ಫಂಡ್ ಆಫ್ ಇಂಡಿಯಾ ಎಂದರೆ, ಸರ್ಕಾರವು ಖರ್ಚು, ಸಾಲ ಮತ್ತು ತೆರಿಗೆ ರೂಪದಲ್ಲಿ ಸಂಗ್ರಹಿಸಿದ ಒಟ್ಟು ಆದಾಯವಾಗಿದೆ.</p>.<p>ಸಂಸದರ ಪ್ರದೇಶ ಅಭಿವೃದ್ಧಿ ಯೋಜನೆಗೆ ನೀಡುವ ನಿಧಿಯನ್ನು 2022ರ ವರೆಗೆ ತಡೆಹಿಡಿಯಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಸಚಿವರು, ‘ಪ್ರತಿಯೊಬ್ಬ ಸಂಸದರ ನಿಧಿಗೆ ನೀಡಬೇಕಿದ್ದ ತಲಾ₹ 10 ಕೋಟಿ ಹಣವನ್ನು ರಾಷ್ಟ್ರ ನಿರ್ಮಾಣ ಕಾರ್ಯಕ್ಕೆ ಬಳಸಿಕೊಳ್ಳಲಾಗುವುದು’ ಎಂದು ಎಂದಿದ್ದಾರೆ.</p>.<p>2020-21 ಮತ್ತು 2021-22ರ ಅವಧಿಯಲ್ಲಿ ಸಂಸದರ ಪ್ರದೇಶಾಭಿವೃದ್ಧಿಗೆ ನೀಡಬೇಕಿದ್ದ ನಿಧಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವುದರಿಂದ ₹ 7,900 ಕೋಟಿ ಕನ್ಸಾಲಿಡೇಟೆಡ್ ಫಂಡ್ಗೆ ಸೇರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>