<p><strong>ನವದೆಹಲಿ: </strong>ದೇಶದಾದ್ಯಂತ ಕೊರೊನಾ ವೈರಸ್ (ಕೋವಿಡ್–19) ಸೊಂಕಿಗೆ ಮೃತಪಟ್ಟವರಸಂಖ್ಯೆ ಶುಕ್ರವಾರ ಮಧ್ಯಾಹ್ನದ ವೇಳೆಗೆ 19ಕ್ಕೆ ಏರಿಕೆಯಾಗಿದೆ. ಸೋಂಕುಪೀಡಿತರ ಸಂಖ್ಯೆ 740 ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಕಿಅಂಶಗಳಿಂದ ತಿಳಿದುಬಂದಿದೆ.</p>.<p>ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ವೈರಸ್ ಸೋಂಕಿಗೆ ವ್ಯಕ್ತಿ ಬಲಿಯಾಗಿದ್ದಾರೆಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮಾಹಿತಿ ನೀಡಿದ್ದಾರೆ</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/covid-19-first-death-in-tumkur-death-toll-rises-3-in-state-715352.html" target="_blank">ತುಮಕೂರಿನಲ್ಲಿ ಕೋವಿಡ್-19ಗೆ ಮೊದಲ ಬಲಿ: ರಾಜ್ಯದಲ್ಲಿ ಮೃತರ ಸಂಖ್ಯೆ ಮೂರಕ್ಕೇರಿಕೆ</a></p>.<p>ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಹೊಸದಾಗಿ 3 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕುಪೀಡಿತರ ಒಟ್ಟು ಸಂಖ್ಯೆ 39 ತಲುಪಿದೆ. ಆಂಧ್ರ ಪ್ರದೇಶದಲ್ಲಿ ಒಂದುಕೋವಿಡ್ ಪ್ರಕರಣದೃಢಪಟ್ಟಿದ್ದು, ರಾಜ್ಯದಲ್ಲಿಸೋಂಕುಪೀಡಿತರ ಒಟ್ಟು ಸಂಖ್ಯೆ 12 ಆಗಿದೆ. ತಮಿಳುನಾಡಿನಲ್ಲಿ ಹೊಸದಾಗಿ 6 ಪ್ರಕರಣಗಳು ದೃಢಪಟ್ಟಿವೆ.</p>.<p>ತೆಲಂಗಾಣ ಮತ್ತು ಒಡಿಶಾಗಳಲ್ಲಿ ಇಂದು ತಲಾ ಒಂದು ಪ್ರಕರಣ ದೃಢಪಟ್ಟಿದೆ. ಒಡಿಶಾದ ಭುವನೇಶ್ವರದಲ್ಲಿ 60 ವರ್ಷ ವಯಸ್ಸಿನ ವೃದ್ಧರೊಬ್ಬರಿಗೆ ಸೋಂಕು ತಗುಲಿರುವುದು ಖಚಿತಪಟ್ಟಿದೆ. ತೆಲಂಗಾಣದ 45 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು, ಒಟ್ಟಾರೆಯಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 45 ಆಗಿದೆ.</p>.<p>ಈ ಮಧ್ಯೆ, ಮಹಾರಾಷ್ಟ್ರದ ಪುಣೆ ಬಳಿಯ ಪಿಂಪ್ರಿ–ಚಿಂಚ್ವಾಡ್ನಲ್ಲಿ ಕೊರೊನಾ ಶಂಕೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮೂವರಿಗೆ ಸೋಂಕು ತಗುಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈವರೆಗೆ ಪುಣೆಯಲ್ಲಿ 32 ಜನರಲ್ಲಿ ಕೊರೊನಾ ದೃಢಪಟ್ಟಿದ್ದು, ಆ ಪೈಕಿ 5 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/coronavirus-india-update-state-wise-total-number-of-confirmed-cases-deaths-713043.html" itemprop="url" target="_blank">Coronavirus update| ಇಲ್ಲಿದೆ ರಾಜ್ಯವಾರು ಶಂಕಿತರು, ಸೋಂಕಿತರು, ಮೃತರ ಸಂಖ್ಯೆ</a></p>.<p>ಮಹಾರಾಷ್ಟ್ರದಲ್ಲಿ ಕೊರೊನಾದಿಂದಾಗಿ ಈವರೆಗೆ 5 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಸೋಂಕು ಪ್ರಕರಣಗಳ ಏರಿಕೆ ದರ ಸ್ಥಿರವಾಗಿದೆ. ದೇಶದಲ್ಲಿ ಸೋಂಕು ಈಗಲೂ ಎರಡನೇ ಹಂತದಲ್ಲಿಯೇ ಇದೆ ಎಂದು ಕೇಂದ್ರ ಸರ್ಕಾರ ಪ್ರತಿಪಾದಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೇಶದಾದ್ಯಂತ ಕೊರೊನಾ ವೈರಸ್ (ಕೋವಿಡ್–19) ಸೊಂಕಿಗೆ ಮೃತಪಟ್ಟವರಸಂಖ್ಯೆ ಶುಕ್ರವಾರ ಮಧ್ಯಾಹ್ನದ ವೇಳೆಗೆ 19ಕ್ಕೆ ಏರಿಕೆಯಾಗಿದೆ. ಸೋಂಕುಪೀಡಿತರ ಸಂಖ್ಯೆ 740 ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಕಿಅಂಶಗಳಿಂದ ತಿಳಿದುಬಂದಿದೆ.</p>.<p>ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ವೈರಸ್ ಸೋಂಕಿಗೆ ವ್ಯಕ್ತಿ ಬಲಿಯಾಗಿದ್ದಾರೆಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮಾಹಿತಿ ನೀಡಿದ್ದಾರೆ</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/covid-19-first-death-in-tumkur-death-toll-rises-3-in-state-715352.html" target="_blank">ತುಮಕೂರಿನಲ್ಲಿ ಕೋವಿಡ್-19ಗೆ ಮೊದಲ ಬಲಿ: ರಾಜ್ಯದಲ್ಲಿ ಮೃತರ ಸಂಖ್ಯೆ ಮೂರಕ್ಕೇರಿಕೆ</a></p>.<p>ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಹೊಸದಾಗಿ 3 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕುಪೀಡಿತರ ಒಟ್ಟು ಸಂಖ್ಯೆ 39 ತಲುಪಿದೆ. ಆಂಧ್ರ ಪ್ರದೇಶದಲ್ಲಿ ಒಂದುಕೋವಿಡ್ ಪ್ರಕರಣದೃಢಪಟ್ಟಿದ್ದು, ರಾಜ್ಯದಲ್ಲಿಸೋಂಕುಪೀಡಿತರ ಒಟ್ಟು ಸಂಖ್ಯೆ 12 ಆಗಿದೆ. ತಮಿಳುನಾಡಿನಲ್ಲಿ ಹೊಸದಾಗಿ 6 ಪ್ರಕರಣಗಳು ದೃಢಪಟ್ಟಿವೆ.</p>.<p>ತೆಲಂಗಾಣ ಮತ್ತು ಒಡಿಶಾಗಳಲ್ಲಿ ಇಂದು ತಲಾ ಒಂದು ಪ್ರಕರಣ ದೃಢಪಟ್ಟಿದೆ. ಒಡಿಶಾದ ಭುವನೇಶ್ವರದಲ್ಲಿ 60 ವರ್ಷ ವಯಸ್ಸಿನ ವೃದ್ಧರೊಬ್ಬರಿಗೆ ಸೋಂಕು ತಗುಲಿರುವುದು ಖಚಿತಪಟ್ಟಿದೆ. ತೆಲಂಗಾಣದ 45 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು, ಒಟ್ಟಾರೆಯಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 45 ಆಗಿದೆ.</p>.<p>ಈ ಮಧ್ಯೆ, ಮಹಾರಾಷ್ಟ್ರದ ಪುಣೆ ಬಳಿಯ ಪಿಂಪ್ರಿ–ಚಿಂಚ್ವಾಡ್ನಲ್ಲಿ ಕೊರೊನಾ ಶಂಕೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮೂವರಿಗೆ ಸೋಂಕು ತಗುಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈವರೆಗೆ ಪುಣೆಯಲ್ಲಿ 32 ಜನರಲ್ಲಿ ಕೊರೊನಾ ದೃಢಪಟ್ಟಿದ್ದು, ಆ ಪೈಕಿ 5 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/coronavirus-india-update-state-wise-total-number-of-confirmed-cases-deaths-713043.html" itemprop="url" target="_blank">Coronavirus update| ಇಲ್ಲಿದೆ ರಾಜ್ಯವಾರು ಶಂಕಿತರು, ಸೋಂಕಿತರು, ಮೃತರ ಸಂಖ್ಯೆ</a></p>.<p>ಮಹಾರಾಷ್ಟ್ರದಲ್ಲಿ ಕೊರೊನಾದಿಂದಾಗಿ ಈವರೆಗೆ 5 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಸೋಂಕು ಪ್ರಕರಣಗಳ ಏರಿಕೆ ದರ ಸ್ಥಿರವಾಗಿದೆ. ದೇಶದಲ್ಲಿ ಸೋಂಕು ಈಗಲೂ ಎರಡನೇ ಹಂತದಲ್ಲಿಯೇ ಇದೆ ಎಂದು ಕೇಂದ್ರ ಸರ್ಕಾರ ಪ್ರತಿಪಾದಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>