<p><strong>ನವದೆಹಲಿ</strong>: ಕೋವಿಡ್–19 ವೈರಸ್ ಭೀತಿ ವ್ಯಾಪಕವಾಗಿರುವುದರಿಂದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ ಹೋಳಿ ಸಮಾರಂಭದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ.</p>.<p>‘ಕೋವಿಡ್–19 ಹರಡುವ ಸಂಭವ ಇರುವುದರಿಂದ ಜನರು ಗುಂಪು ಸೇರುವುದನ್ನು ಕಡಿಮೆ ಮಾಡುವಂತೆ ತಜ್ಞರು ಸಲಹೆ ನೀಡಿದ್ದಾರೆ. ಹೀಗಾಗಿ ಸಮಾರಂಭದಲ್ಲಿ ಭಾಗವಹಿಸುತ್ತಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>‘ಭಾರತೀಯರಿಗೆ ಹೋಳಿ ಬಹುಮುಖ್ಯವಾದ ಹಬ್ಬ. ಆದರೆ, ಈ ಬಾರಿ ನಾನು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಸಾರ್ವಜನಿಕರು ಸಭೆ, ಸಮಾರಂಭಗಳಲ್ಲಿ ಭಾಗವಹಿಸುವುದನ್ನುಕಡಿಮೆ ಮಾಡಬೇಕು. ನಿಮ್ಮ ಮತ್ತು ಕುಟುಂಬದ ಆರೋಗ್ಯದ ಗಮನ ನೀಡಿ’ ಎಂದು ಸಲಹೆ ನೀಡಿ ಅಮಿತ್ ಶಾ ಅವರು ಟ್ವೀಟ್ ಮಾಡಿದ್ದಾರೆ.</p>.<p>ದೆಹಲಿ ಹಿಂಸಾಚಾರ–ಸಮಾರಂಭದಲ್ಲಿ ಪಾಲ್ಗೊಳ್ಳದ ಎಎಪಿ: ಹಿಂಸಾಚಾರದಿಂದ ಈಶಾನ್ಯ ದೆಹಲಿ ನಲುಗಿರುವ ಹಿನ್ನೆಲೆಯಲ್ಲಿ ಹೋಳಿ ಸಮಾರಂಭದಲ್ಲಿ ಪಾಲ್ಗೊಳ್ಳದಿರಲು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಪಕ್ಷದ ಮುಖಂಡರು ನಿರ್ಧರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೋವಿಡ್–19 ವೈರಸ್ ಭೀತಿ ವ್ಯಾಪಕವಾಗಿರುವುದರಿಂದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ ಹೋಳಿ ಸಮಾರಂಭದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ.</p>.<p>‘ಕೋವಿಡ್–19 ಹರಡುವ ಸಂಭವ ಇರುವುದರಿಂದ ಜನರು ಗುಂಪು ಸೇರುವುದನ್ನು ಕಡಿಮೆ ಮಾಡುವಂತೆ ತಜ್ಞರು ಸಲಹೆ ನೀಡಿದ್ದಾರೆ. ಹೀಗಾಗಿ ಸಮಾರಂಭದಲ್ಲಿ ಭಾಗವಹಿಸುತ್ತಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>‘ಭಾರತೀಯರಿಗೆ ಹೋಳಿ ಬಹುಮುಖ್ಯವಾದ ಹಬ್ಬ. ಆದರೆ, ಈ ಬಾರಿ ನಾನು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಸಾರ್ವಜನಿಕರು ಸಭೆ, ಸಮಾರಂಭಗಳಲ್ಲಿ ಭಾಗವಹಿಸುವುದನ್ನುಕಡಿಮೆ ಮಾಡಬೇಕು. ನಿಮ್ಮ ಮತ್ತು ಕುಟುಂಬದ ಆರೋಗ್ಯದ ಗಮನ ನೀಡಿ’ ಎಂದು ಸಲಹೆ ನೀಡಿ ಅಮಿತ್ ಶಾ ಅವರು ಟ್ವೀಟ್ ಮಾಡಿದ್ದಾರೆ.</p>.<p>ದೆಹಲಿ ಹಿಂಸಾಚಾರ–ಸಮಾರಂಭದಲ್ಲಿ ಪಾಲ್ಗೊಳ್ಳದ ಎಎಪಿ: ಹಿಂಸಾಚಾರದಿಂದ ಈಶಾನ್ಯ ದೆಹಲಿ ನಲುಗಿರುವ ಹಿನ್ನೆಲೆಯಲ್ಲಿ ಹೋಳಿ ಸಮಾರಂಭದಲ್ಲಿ ಪಾಲ್ಗೊಳ್ಳದಿರಲು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಪಕ್ಷದ ಮುಖಂಡರು ನಿರ್ಧರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>