'ದ್ವಾರಕಾದ ದೆಹಲಿ ನಗರ ಆಶ್ರಯ ಸುಧಾರಣಾ ಮಂಡಳಿಯ ಫ್ಲಾಟ್ 16 ಬಿ ಕ್ವಾರಂಟೈನ್ ಕೇಂದ್ರದಲ್ಲಿ ನಿಯೋಜನೆಗೊಂಡಿದ್ದ ನಾಗರಿಕ ರಕ್ಷಣಾ ಸಿಬ್ಬಂದಿ ಘಟನೆ ಸಂಬಂಧ ಮಂಗಳವಾರ ಸಂಜೆ 6ಕ್ಕೆ ಪೊಲೀಸರಿಗೆ ದೂರು ನೀಡಿದ್ದರು. ಪಂಪ್ ಹೌಸ್ ಸಮೀಪ ಮೂತ್ರ ತುಂಬಿದ ಎರಡು ಬಾಟಲಿಗಳನ್ನು ಎಸೆಯಲಾಗಿದೆ. ಅವುಗಳನ್ನು ಕ್ವಾರಂಟೈನ್ನಲ್ಲಿರುವ ವ್ಯಕ್ತಿಗಳೇ ತೂರಿದ್ದಾರೆ ಎಂದು ಶಂಕಿಸಲಾಗಿದ್ದು, ಎಫ್ಐಆರ್ ದಾಖಲಾಗಿಸಲಾಗಿದೆ.