ಸಾಮಾನ್ಯ ಟಿಕೆಟ್ ಪಡೆದಿದ್ದ ಆರೋಪಿ ರಿಸರ್ವೇಷನ್ ಕಂಪಾರ್ಟ್ಮೆಂಟ್ ಪ್ರವೇಶಿಸಿದ್ದರು. ಮದ್ರಾಸ್ ಹೈಕೋರ್ಟ್ ವಕೀಲರ ಸಂಘದ ಗುರುತುಚೀಟಿಯನ್ನೂ ಹೊಂದಿದ್ದ ಅವರು ಬಾಲಕಿ ಮತ್ತು ಆಕೆಯ ಕುಟುಂಬದವರಿದ್ದ ಎದುರಿನ ಬರ್ತ್ನಲ್ಲಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘ನಾನು ವಕೀಲ, ನನಗೆ ಬಿಜೆಪಿ ಜತೆ ಸಂಪರ್ಕ ಇದೆ’ ಎಂದು ಆರೋಪಿಯು ಸಹ ಪ್ರಯಾಣಿಕರಿಗೆ ಧಮಕಿ ಹಾಕಿದ್ದರು. ನಂತರ ಆರೋಪಿಯನ್ನು ರೈಲ್ವೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ