<p><strong>ನವದೆಹಲಿ: </strong>ಆರ್ಎಸ್ಎಸ್ ಕಾರ್ಯಕರ್ತ ವಿವೇಕ್ ದಾಖಲಿಸಿದ್ದ ಮಾನನಷ್ಟ ಅರ್ಜಿಗೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತುಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರಿಗೆದೆಹಲಿ ನ್ಯಾಯಾಲಯ ಸಮನ್ಸ್ ನೀಡಿದ್ದು, ಏಪ್ರಿಲ್ 30ಕ್ಕೆ ಹಾಜರಾಗುವಂತೆ ಸೂಚಿಸಿದೆ.</p>.<p>ಗೌರಿ ಲಂಕೇಶ್ ಹತ್ಯೆಯಲ್ಲಿ ಆರ್ಎಸ್ಎಸ್ ಸಂಘಟನೆ ಕೈವಾಡವಿದೆ ಎಂದು ರಾಹುಲ್ ಗಾಂಧಿ ಮತ್ತು ಸೀತಾರಾಂ ಯೆಚೂರಿ ಮಾತನಾಡಿದ್ದನ್ನು ವಿರೋಧಿಸಿ ವಿವೇಕ್ ಅವರು ₹1ಗೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.</p>.<p>ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜೆ.ಎಸ್ ಭಾಟಿಯಾ, ಇಬ್ಬರಿಗೂ ಸಮನ್ಸ್ ನೀಡಿ, ಏಪ್ರಿಲ್ 30ಕ್ಕೆ ಕೋರ್ಟ್ಗೆ ಹಾಜರಾಗುವಂತೆ ಸೂಚಿಸಿದ್ದಾರೆ.</p>.<p>ಯಾವುದೇ ಹಿಂಸಾಚಾರ ನಡೆದರೂ ಅದಕ್ಕೆ ಆರ್ಎಸ್ಎಸ್ ನಂಟು ಕಲ್ಪಿಸಿ ಮಾತನಾಡುವುದು ರಾಹುಲ್ ಗಾಂಧಿ ಮತ್ತು ಯೆಚೂರಿ ಅವರಿಗೆ ಅಭ್ಯಾಸವಾಗಿದೆ. ನಿರಾಧಾರವಾಗಿ ಎಲ್ಲವನ್ನೂ ಸಂಘಟನೆಯ ತಲೆಗೆ ಕಟ್ಟುವುದನ್ನು ತಕ್ಷಣವೇ ನಿಲ್ಲಿಸಲು ಅವರಿಗೆ ಕೋರ್ಟ್ ನಿರ್ದೇಶನ ನೀಡಬೇಕು’ ಎಂದು ಅವರು ಅರ್ಜಿಯಲ್ಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಆರ್ಎಸ್ಎಸ್ ಕಾರ್ಯಕರ್ತ ವಿವೇಕ್ ದಾಖಲಿಸಿದ್ದ ಮಾನನಷ್ಟ ಅರ್ಜಿಗೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತುಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರಿಗೆದೆಹಲಿ ನ್ಯಾಯಾಲಯ ಸಮನ್ಸ್ ನೀಡಿದ್ದು, ಏಪ್ರಿಲ್ 30ಕ್ಕೆ ಹಾಜರಾಗುವಂತೆ ಸೂಚಿಸಿದೆ.</p>.<p>ಗೌರಿ ಲಂಕೇಶ್ ಹತ್ಯೆಯಲ್ಲಿ ಆರ್ಎಸ್ಎಸ್ ಸಂಘಟನೆ ಕೈವಾಡವಿದೆ ಎಂದು ರಾಹುಲ್ ಗಾಂಧಿ ಮತ್ತು ಸೀತಾರಾಂ ಯೆಚೂರಿ ಮಾತನಾಡಿದ್ದನ್ನು ವಿರೋಧಿಸಿ ವಿವೇಕ್ ಅವರು ₹1ಗೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.</p>.<p>ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜೆ.ಎಸ್ ಭಾಟಿಯಾ, ಇಬ್ಬರಿಗೂ ಸಮನ್ಸ್ ನೀಡಿ, ಏಪ್ರಿಲ್ 30ಕ್ಕೆ ಕೋರ್ಟ್ಗೆ ಹಾಜರಾಗುವಂತೆ ಸೂಚಿಸಿದ್ದಾರೆ.</p>.<p>ಯಾವುದೇ ಹಿಂಸಾಚಾರ ನಡೆದರೂ ಅದಕ್ಕೆ ಆರ್ಎಸ್ಎಸ್ ನಂಟು ಕಲ್ಪಿಸಿ ಮಾತನಾಡುವುದು ರಾಹುಲ್ ಗಾಂಧಿ ಮತ್ತು ಯೆಚೂರಿ ಅವರಿಗೆ ಅಭ್ಯಾಸವಾಗಿದೆ. ನಿರಾಧಾರವಾಗಿ ಎಲ್ಲವನ್ನೂ ಸಂಘಟನೆಯ ತಲೆಗೆ ಕಟ್ಟುವುದನ್ನು ತಕ್ಷಣವೇ ನಿಲ್ಲಿಸಲು ಅವರಿಗೆ ಕೋರ್ಟ್ ನಿರ್ದೇಶನ ನೀಡಬೇಕು’ ಎಂದು ಅವರು ಅರ್ಜಿಯಲ್ಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>