ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಎಸ್‌ಎಸ್‌ ವಿರುದ್ಧ ಆರೋಪ: ರಾಹುಲ್‌, ಯೆಚೂರಿಗೆ ಕೋರ್ಟ್‌ ಸಮನ್ಸ್‌

Last Updated 3 ಏಪ್ರಿಲ್ 2019, 6:10 IST
ಅಕ್ಷರ ಗಾತ್ರ

ನವದೆಹಲಿ: ಆರ್‌ಎಸ್‌ಎಸ್‌ ಕಾರ್ಯಕರ್ತ ವಿವೇಕ್‌ ದಾಖಲಿಸಿದ್ದ ಮಾನನಷ್ಟ ಅರ್ಜಿಗೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತುಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರಿಗೆದೆಹಲಿ ನ್ಯಾಯಾಲಯ ಸಮನ್ಸ್‌ ನೀಡಿದ್ದು, ಏಪ್ರಿಲ್‌ 30ಕ್ಕೆ ಹಾಜರಾಗುವಂತೆ ಸೂಚಿಸಿದೆ.

ಗೌರಿ ಲಂಕೇಶ್‌ ಹತ್ಯೆಯಲ್ಲಿ ಆರ್‌ಎಸ್‌ಎಸ್‌ ಸಂಘಟನೆ ಕೈವಾಡವಿದೆ ಎಂದು ರಾಹುಲ್‌ ಗಾಂಧಿ ಮತ್ತು ಸೀತಾರಾಂ ಯೆಚೂರಿ ಮಾತನಾಡಿದ್ದನ್ನು ವಿರೋಧಿಸಿ ವಿವೇಕ್‌ ಅವರು ₹1ಗೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜೆ.ಎಸ್‌ ಭಾಟಿಯಾ, ಇಬ್ಬರಿಗೂ ಸಮನ್ಸ್‌ ನೀಡಿ, ಏಪ್ರಿಲ್‌ 30ಕ್ಕೆ ಕೋರ್ಟ್‌ಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಯಾವುದೇ ಹಿಂಸಾಚಾರ ನಡೆದರೂ ಅದಕ್ಕೆ ಆರ್‌ಎಸ್‌ಎಸ್‌ ನಂಟು ಕಲ್ಪಿಸಿ ಮಾತನಾಡುವುದು ರಾಹುಲ್‌ ಗಾಂಧಿ ಮತ್ತು ಯೆಚೂರಿ ಅವರಿಗೆ ಅಭ್ಯಾಸವಾಗಿದೆ. ನಿರಾಧಾರವಾಗಿ ಎಲ್ಲವನ್ನೂ ಸಂಘಟನೆಯ ತಲೆಗೆ ಕಟ್ಟುವುದನ್ನು ತಕ್ಷಣವೇ ನಿಲ್ಲಿಸಲು ಅವರಿಗೆ ಕೋರ್ಟ್‌ ನಿರ್ದೇಶನ ನೀಡಬೇಕು’ ಎಂದು ಅವರು ಅರ್ಜಿಯಲ್ಲಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT