ಶ್ರೀನಗರ: ಕೋವಿಡ್–19 ಲಾಕ್ಡೌನ್ ನಿಯಮ ಉಲ್ಲಂಘಿಸಿ ಜೈಷೆ–ಇ–ಮೊಹಮ್ಮದ್ (ಜೆಇಎಂ) ಉಗ್ರನ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡ ಇಬ್ಬರ ವಿರುದ್ಧ ಬುಧವಾರ ದೂರು ದಾಖಲಾಗಿದೆ.
ಉತ್ತರ ಕಾಶ್ಮೀರದ ಬಾರಾಮುಲ್ಲ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಗುಂಡಿಗೆ ಬಲಿಯಾದ ಜೆಇಎಂ ಕಮಾಂಡರ್ ಸಜಾದ್ ನವಾಬ್ ದಾರ್ನ ಅಂತ್ಯಕ್ರಿಯೆಯಲ್ಲಿ ಸ್ಥಳೀಯ ನೂರಾರು ಜನರು ಪಾಲ್ಗೊಂಡಿದ್ದರು. ಅವರಲ್ಲಿ ಇಬ್ಬರ ವಿರುದ್ಧ ಕೋವಿಡ್ ನಿಯಮಾವಳಿ ಉಲ್ಲಂಘನೆ ಹಾಗೂ ಸೆಕ್ಷನ್ 144 ಆದೇಶ ಉಲ್ಲಂಘನೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.