ಅಮರಾವತಿ, ಎಪಿ: ವಿಜಯವಾಡ ಸರ್ಕಾರಿ ಆಸ್ಪತ್ರೆಯಲ್ಲಿ 55 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಕೊರೊನಾ ಸೋಂಕಿನಿಂದಲೇ ಎಂಬುದನ್ನು ಆಂಧ್ರಪ್ರದೇಶ ಸರ್ಕಾರ ಶುಕ್ರವಾರ ದೃಢಪಡಿಸಿದೆ.
ಇವರು ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟ ಮೊದಲ ವ್ಯಕ್ತಿ. ಮೃತ ವ್ಯಕ್ತಿಯ ಮಗ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ಈಚೆಗೆ ನಡೆದಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅವರು ಕೋವಿಡ್–19 ಪೀಡಿತರಾಗಿದ್ದು, ಅವರಿಂದಲೇ ವ್ಯಕ್ತಿಗೆ ಸೋಂಕು ತಗುಲಿತ್ತು ಎನ್ನಲಾಗಿದೆ.