<p><strong>ನವದೆಹಲಿ</strong>: ದೇಶದಲ್ಲಿ ಕೋವಿಡ್ ರೋಗದಿಂದ ಸಾವಿಗೀಡಾದವರ ಸಂಖ್ಯೆ 100 ದಾಟಿದೆ.ಒಟ್ಟು 4067 ಸೋಂಕು ಪ್ರಕರಣಗಳು ವರದಿಯಾಗಿದ್ದು, 291 ಮಂದಿ ಗುಣಮುಖರಾಗಿದ್ದಾರೆ.</p>.<p>ಜಗತ್ತಿನಾದ್ಯಂತ ಕೋವಿಡ್ ರೋಗಕ್ಕೆ ಬಲಿಯಾದವರ ಸಂಖ್ಯೆ 70,000ಕ್ಕೆ ತಲುಪಿದೆ. ಸುಮಾರು 1.2 ದಶಲಕ್ಷ ಜನರಿಗೆ ಸೋಂಕು ತಗುಲಿದೆ.</p>.<p>ಉತ್ತರ ಪ್ರದೇಶದಲ್ಲಿ ಏಪ್ರಿಲ್ 3ರಂದು ಸಾವಿಗೀಡಾದ 55ರ ಹರೆಯದ ವ್ಯಕ್ತಿಗೆ ಕೊರೊನಾ ಸೋಂಕು ಇತ್ತು ಎಂದು ತಿಳಿದುಬಂದಿದೆ.ಇದೀಗ ಕೋವಿಡ್ನಿಂದಾಗಿ ಉತ್ತರ ಪ್ರದೇಶದಲ್ಲಿ ಸಾವಿಗೀಡಾದವರ ಸಂಖ್ಯೆ 3ಕ್ಕೇರಿದೆ. ಮೃತ ವ್ಯಕ್ತಿಯ ಕುಟುಂಬದ 10 ಸದಸ್ಯರನ್ನು ಕ್ವಾರಂಟೈನ್ನಲ್ಲಿರಿಸಲಾಗಿದೆ.</p>.<p>ರಾಜಸ್ಥಾನದಲ್ಲಿ 8 ಮಂದಿಗೆ ಕೋವಿಡ್ ರೋಗ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 274 ಆಗಿದೆ. ಜುನ್ಜುನ್-5, ದುಂಗರ್ಪುರ್ -2 ಮತ್ತು ಕೋಟಾದಲ್ಲಿನ ಒಬ್ಬ ವ್ಯಕ್ತಿಗೆ ಸೋಂಕು ತಗುಲಿದೆ ಎಂದು ರಾಜಸ್ಥಾನದ ಆರೋಗ್ಯ ಇಲಾಖೆ ಹೇಳಿದೆ.</p>.<p>ಮಧ್ಯಪ್ರದೇಶದ ರಾಜಧಾನಿ ಭೋಪಾಲ್ನಲ್ಲಿ 52 ಹರೆಯದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದು, ಕೋವಿಡ್ಗೆ ಬಲಿಯಾದವರ ಸಂಖ್ಯೆ 14 ಆಗಿದೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ. ರಾಜ್ಯದ ರಾಜಧಾನಿಯಲ್ಲಿ ಕೋವಿಡ್ಗೆ ಬಲಿಯಾದ ಮೊದಲ ಪ್ರಕರಣ ಇದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದಲ್ಲಿ ಕೋವಿಡ್ ರೋಗದಿಂದ ಸಾವಿಗೀಡಾದವರ ಸಂಖ್ಯೆ 100 ದಾಟಿದೆ.ಒಟ್ಟು 4067 ಸೋಂಕು ಪ್ರಕರಣಗಳು ವರದಿಯಾಗಿದ್ದು, 291 ಮಂದಿ ಗುಣಮುಖರಾಗಿದ್ದಾರೆ.</p>.<p>ಜಗತ್ತಿನಾದ್ಯಂತ ಕೋವಿಡ್ ರೋಗಕ್ಕೆ ಬಲಿಯಾದವರ ಸಂಖ್ಯೆ 70,000ಕ್ಕೆ ತಲುಪಿದೆ. ಸುಮಾರು 1.2 ದಶಲಕ್ಷ ಜನರಿಗೆ ಸೋಂಕು ತಗುಲಿದೆ.</p>.<p>ಉತ್ತರ ಪ್ರದೇಶದಲ್ಲಿ ಏಪ್ರಿಲ್ 3ರಂದು ಸಾವಿಗೀಡಾದ 55ರ ಹರೆಯದ ವ್ಯಕ್ತಿಗೆ ಕೊರೊನಾ ಸೋಂಕು ಇತ್ತು ಎಂದು ತಿಳಿದುಬಂದಿದೆ.ಇದೀಗ ಕೋವಿಡ್ನಿಂದಾಗಿ ಉತ್ತರ ಪ್ರದೇಶದಲ್ಲಿ ಸಾವಿಗೀಡಾದವರ ಸಂಖ್ಯೆ 3ಕ್ಕೇರಿದೆ. ಮೃತ ವ್ಯಕ್ತಿಯ ಕುಟುಂಬದ 10 ಸದಸ್ಯರನ್ನು ಕ್ವಾರಂಟೈನ್ನಲ್ಲಿರಿಸಲಾಗಿದೆ.</p>.<p>ರಾಜಸ್ಥಾನದಲ್ಲಿ 8 ಮಂದಿಗೆ ಕೋವಿಡ್ ರೋಗ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 274 ಆಗಿದೆ. ಜುನ್ಜುನ್-5, ದುಂಗರ್ಪುರ್ -2 ಮತ್ತು ಕೋಟಾದಲ್ಲಿನ ಒಬ್ಬ ವ್ಯಕ್ತಿಗೆ ಸೋಂಕು ತಗುಲಿದೆ ಎಂದು ರಾಜಸ್ಥಾನದ ಆರೋಗ್ಯ ಇಲಾಖೆ ಹೇಳಿದೆ.</p>.<p>ಮಧ್ಯಪ್ರದೇಶದ ರಾಜಧಾನಿ ಭೋಪಾಲ್ನಲ್ಲಿ 52 ಹರೆಯದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದು, ಕೋವಿಡ್ಗೆ ಬಲಿಯಾದವರ ಸಂಖ್ಯೆ 14 ಆಗಿದೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ. ರಾಜ್ಯದ ರಾಜಧಾನಿಯಲ್ಲಿ ಕೋವಿಡ್ಗೆ ಬಲಿಯಾದ ಮೊದಲ ಪ್ರಕರಣ ಇದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>