ಈ ಬಗ್ಗೆ ತಿಳಿಸಿರುವ ಕೇಂದ್ರ ಸಚಿವ ಜಿ. ಕೃಷ್ಣ ರೆಡ್ಡಿ ‘ಫಿಲಿಪೀನ್ಸ್ನಲ್ಲಿ ಓದುತ್ತಿರುವ ಭಾರತೀಯ ವಿದ್ಯಾರ್ಥಿಗಳನ್ನು ತವರಿಗೆ ಮರಳಿ ಕರೆತರುವ ಬಗ್ಗೆ ಕೇಂದ್ರ ಸರ್ಕಾರವು ಶುಕ್ರವಾರ ಚರ್ಚೆ ನಡೆಸಲಿದೆ. ಭಾರತದಲ್ಲಿ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ವಿದೇಶಿ ವಿಮಾನಗಳಿಗೆ ನಿರ್ಬಂಧ ಹೇರಲಾಗಿದೆ. ಆ ಕಾರಣ, ಫಿಲಿಪೀನ್ಸ್ನಲ್ಲಿ ಉಳಿದಿರುವ ಭಾರತ ಮೂಲಕ ವಿದ್ಯಾರ್ಥಿಗಳು ತವರಿಗೆ ವಾಪಸ್ಸಾಗಲು ಸಾಧ್ಯವಾಗುತ್ತಿಲ್ಲ‘ ಎಂದು ಹೇಳಿದ್ದಾರೆ.